Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸೇರಿದಂತೆ ಹಲವು ಗ್ರಾಮಗಳಿಗೆ ಸರಬರಾಜು ಆಗುತ್ತಿದ್ದ ಸೂಳೆಕೆರೆ ನೀರು ಸ್ಥಗಿತ..!

---Advertisement---

 

 

ದಾವಣೆಗೆರೆ ಜಿಲ್ಲೆಯ ಸೂಳೆಕೆರೆ ಏಷ್ಯಾದ ಎರಡನೇ ದೊಡ್ಡ ಕೆರೆ. ಈ ಕೆರೆಯ ನೀರನ್ನು ಸುಮಾರು ಹಳ್ಳಿಗಳಿಗೆ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಇದೀಗ ನೀರು ಕುಡಿಯಲು ಯೋಗ್ಯವಲ್ಲದ ಕಾರಣದಿಂದಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಈ ಕೆರೆಯಲ್ಲಿ ನಾಲ್ಕು ಲಕ್ಷ ಲೀಟರ್ ನೀರು ಶೇಖರಣೆ ಮಾಡುವ ಸಾಮರ್ಥ್ಯ ಹೊಂದಿದೆ.

ಶುದ್ಧೀಕರಣ ಘಟಕದಲ್ಲಿರುವ ಫಿಲ್ಟರ್ ಹಾಳಾಗಿತ್ತು. ಈ ಹಿನ್ನೆಲೆ ಒಮ್ಮೊಮ್ಮೆ ನೀಲಿ, ಕೆಂಪು ಹೀಗೆ ಬೇರೆ ಬೇರೆ ಬಣ್ಣಕ್ಕೆ ನೀರು ತಿರುಗಿತ್ತು. ಜನ ಕೂಡ ಇದರ ಬಗ್ಗೆ ಸಾಕಷ್ಟು ಸಲ ದೂರು ನೀಡಿದ್ದರು. ಈಗ ಆ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸದ್ಯಕ್ಕೆ ಈ ನೀರು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿದೆ. ಹೀಗಾಗಿ ಸರಬರಾಜು ಮಾಡುವುದನ್ನು ನಿಲ್ಲಿಸಲಾಗಿದೆ.

ಮೂರು ತಿಂಗಳ ಕಾಲ ನೀರನ್ನು ಸರಬರಾಜು‌ ಮಾಡುವುದನ್ನು ನಿಲ್ಲಿಸಲಾಗಿದೆ. ದುರಸ್ಥಿಗೊಳಿಸಿದ ಬಳಿಕ ಮತ್ತೆ ಪ್ರಯೋಗಾಲಯಕ್ಕೆ ನೀರು ಕಳುಹಿಸಲಾಗುತ್ತದೆ. ಆ ಬಳಿಕ ಬರುವ ವರದಿಯ ಮೇಲೆ ಮತ್ತೆ ನೀರನ್ನು ಸರಬರಾಜು ಮಾಡಲಾಗುತ್ತದೆ. ಹೊಳಲ್ಕೆರೆ, ಜಗಳೂರು, ಚಿತ್ರದುರ್ಗಕ್ಕೆ ಪೂರೈಕೆಯಾಗುತ್ತಿತ್ತು. ಈ ಸಂಬಂಧ ದಾವಣಗೆರೆ ಜಿಲ್ಲಾ ಆರೋಗ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment