Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವಸ್ಥಾನ ಉದ್ಘಾಟನೆಗೆ ಬಂದ ಸುಮಲತಾ : ವಿರೋಧಿಸಿ ಜಗಳಕ್ಕೆ‌ನಿಂತ ಕಾಂಗ್ರೆಸ್ ಕಾರ್ಯಕರ್ತರು..!

---Advertisement---

ಮಂಡ್ಯ : ಕಾಂಗ್ರೆಸ್ ಹಾಗೂ ಸಂಸದೆ ಸುಮಲತಾ ಬಣದ ನಡುವೆ ಕಿತ್ತಾಟ ನಡೆದು, ಕೈಕೈ ಮಿಲಾಯಿಸಿದ ಘಟನೆ ಜಿಲ್ಲೆಯ ಬಿ ಗೌಡಗೆರೆ ಗ್ರಾಮದಲ್ಲಿ ನಡೆದಿದೆ. ದೇವಸ್ಥಾನದ ಉದ್ಘಾಟನೆಗೆಂದು ಸುಮಲತಾ ಬಂದಿದ್ದರು. ಈ ವೇಳೆ ಇಂಥ ಘಟನೆ ನಡೆದಿದೆ. ವೇದಿಕೆ ಏರುವ ವಿಚಾರಕ್ಕೆ ಎರಡು ಬಣಗಳ ನಡುವೆ ಗಲಾಟೆ ನಡೆದು, ಗಲಾಟೆ ತಾರಕಕ್ಕೇರಿದೆ.

ಗೌಡನಗೆರೆ ಗ್ರಾಮದಲ್ಲಿ ಮಹದೇಶ್ವರ ದೇವಾಲಯದ ಉದ್ಘಾಟನೆ ಇತ್ತು. ಉದ್ಘಾಟನಾ ಕಾರ್ಯಕ್ರಮಕ್ಕೆ ಸುಮಲತಾ ಅವರನ್ನು ಆಹ್ವಾನ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆಂದು ವೇದಿಕೆ ಸಿದ್ಧ ಮಾಡಲಾಗಿತ್ತು. ಈ ವೇದಿಕೆಗೆ ಯಾವುದೇ ಕಾರಣಕ್ಕೂ ರಾಜಕೀಯ ವ್ಯಕ್ತಿಗಳನ್ನು ಹತ್ತಿಸಬಾರದೆಂದು ಮೊದಲೇ ತೀರ್ಮಾನ ಮಾಡಲಾಗಿತ್ತು.

ಆದರೆ ಸುಮಲತಾ ಅವರನ್ನು ವೇದಿಕೆಗೆ ಕರೆತಂದಿದ್ದರಿಂದ ಗ್ರಾಮಸ್ಥರಿಗೆ ಕೋಪ ಬಂದಿತ್ತು. ಈ ವೇಳೆ ವೇದಿಕೆ ಮೇಲೆ ಸುಮಲತಾ ಅವರನ್ನು ಯಾಕೆ ಹತ್ತಿಸುತ್ತೀರಿ ಎಂದು ಪ್ರಶ್ನಿಸಿದರು. ಮಾತಿನ ವಾಗ್ವಾದ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಎರಡು ಬಣಗಳ ನಡುವೆ ಇದೇ ವಿಚಾರ ಬಡಿದಾಡಿಕೊಳ್ಳುವ ಹಂತಕ್ಕೂ ಹೋಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...