Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೋಕಸಭೆಯಲ್ಲಿ ಬರ ಪರಿಸ್ಥಿತಿ ಬಗ್ಗೆ ಧ್ವನಿ ಎತ್ತಿದ ಸುಮಲತಾ

---Advertisement---

 

ನವದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಬರ ತಾಂಡವವಾಡುತ್ತಿದೆ. ಬರದ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಪರಿಹಾರ ಸಿಕ್ಕಿಲ್ಲ. ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಕೇಂದ್ರಕ್ಕೆ ಮನವಿ ಮಾಡುವ ಅನಿವಾರ್ಯತೆ ಇತ್ತು.

ಇಂದು ಲೋಕಸಭೆಯಲ್ಲಿ ಸಂಸದೆ ಸುಮಲತಾ ಬರ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಿ ಮೋದಿಯವರ ಗಮನ ಸೆಳೆಯುವುದರತ್ತ ಪ್ರಯತ್ನ ಮಾಡಿದ್ದರು. 2023ರಲ್ಲಿ ಇಂದೆಂದೂ ಕಾಣದ ಉಷ್ಣತೆ ಹೆಚ್ಚಾಗಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಮಾನ್ಸೂನ್ ಕ್ಷೀಣಿಸಿದೆ. ಇದರ ಪರಿಣಾಮ ರಾಜ್ಯದ 223 ತಾಲೂಕುಗಳು ಬರ ಪೀಡಿತವಾಗಿವೆ. ಅಂದಾಜು 30 ಸಾವಿರ ಕೋಟಿ‌ ರೂಪಾಯಿಯಷ್ಟು ನಷ್ಟವಾಗಿದೆ. ಹೀಗಾಗಿ ಕರ್ನಾಟಕದ ರೈತರಿಗೆ ನೆರವಾಗಬೇಕು. ಮಂಡ್ಯದ ಎಲ್ಲಾ ತಾಲೂಕುಗಳನ್ನು ಬರ ಪೀಡಿತವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. 60ರಿಂದ 70 ಪರ್ಸೆಂಟ್ ಬೆಳೆ ನಾಶವಾಗಿದೆ. ಕಬ್ಬು ಬೆಳೆಗಾರರಿಗೆ ಬೆಳೆ ವಿಮೆ ಲಭ್ಯವಾಗಿಲ್ಲ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟದ ರೈತರ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದ್ದರು.

ಬರದ ಬಗ್ಗೆ ಧ್ವನಿ ಎತ್ತಿದವರಲ್ಲಿ ಸುಮಲತಾ ಮೊದಲಿಗರು. ಆದರೆ ಬಿಜೆಪಿಯ ಇನ್ನೊಬ್ಬ ಸಂಸದ ಇದೇ ಶೂನ್ಯವೇಳೆಯಲ್ಲಿ ಜಾತಿ ಮೀಸಲಾತಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಲಬುರಗಿ ಬಿಜೆಪಿ ಸಂಸದ ಜಾತಿ ಮೀಸಲಾತಿ ಬಗ್ಗೆ ಮಾತನಾಡಿದ್ದಾರೆ. ಲೋಕಸಭೆಯ ಶೂನ್ಯವೇಳೆಯಲ್ಲಿ ವೇಳೆಯಲ್ಲಿ ಮಾತನಾಡಿದ ಉಮೇಶ್ ಜಾಧವ್, ಕೋಲಿ, ಕಬ್ಬಲಿಗ, ಗಂಗಾಮತಸ್ಥ ಸಮುದಾಯವನ್ನು ಎಸ್​ಟಿಗೆ ಸೇರಿಸಬೇಕೆಂದು ಮನವಿ ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment