Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಮೆರಿಕಾದಲ್ಲಿ ಕೈದಿಗಳಿಗೆ ಡ್ರಗ್ಸ್ ಸಿಗುತ್ತೆ ಎಂದ ಸುಮಲತಾ : ಪರಪ್ಪನ ಅಗ್ರಹಾರಕ್ಕೆ ಖಡಕ್ ಆಫೀಸರ್ ಎಂಟ್ರಿ..!

Facebook
Twitter
Telegram
WhatsApp

ಬೆಂಗಳೂರು: ಕಳೆದ ಎರಡು ದಿನದಿಂದ ದರ್ಶನ್ ಮತ್ತೆ ಸುದ್ದಿಯಲ್ಲಿದ್ದಾರೆ. ಜೈಲಿನಲ್ಲಿ ಕೂತು ಕಾಫಿ ಕುಡಿಯುತ್ತಾ, ಸಿಗರೇಟ್ ಹೊಗೆ ಬಿಡುತ್ತಾ, ರೌಡಿಶೀಟರ್ ಗಳ ಜೊತೆಗೆ ಹರಟೆ ಹೊಡೆಯುತ್ತಿದ್ದ ಫೋಟೋ ವೈರಲ್ ಆಗಿದ್ದೆ ತಡ, ದರ್ಶನ್ ವಿರುದ್ಧ ಮತ್ತೆ ಮೂರು ಎಫ್ಐಆರ್ ಬೇರೆ ದಾಖಲಾಗಿವೆ.

ದರ್ಶನ್ ಬಗ್ಗೆ ಇಂಥದ್ದೊಂದು ಫೋಟೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ಅವರ ಮದರ್ ಇಂಡಿಯಾ ಸುಮಲತಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಜೈಲಿನಲ್ಲಿ ಹೀಗೆ ನಡೆಯುತ್ತಿರುವುದು ಇದು ಮೊದಲೇನು ಅಲ್ಲ. ಈ ರೀತಿಯ ಪ್ರಕರಣ ಇದೇ ಮೊದಲ ಎಂಬುದನ್ನು ಮೊದಲು ನೋಡಬೇಕು. ಈ ಬಗ್ಗೆ ನಾನು ಮಾತಾಡಿದ್ರೆ ಕಾಂಟ್ರವರ್ಸಿ ಆಗಬಹುದು. ದರ್ಶನ್ ನನಗೆ ಬಹಳ ಆಪ್ತರು. ಬಹಳ ಹತ್ತಿರದವರು. ಜೈಲಿನಲ್ಲಿ ಹಣ ಕೊಟ್ರೆ ಏನು ಬೇಕಾದರೂ ಸಿಗುತ್ತದೆ ಎಂಬುದನ್ನು ಈ ಹಿಂದೆ ಐಪಿಎಸ್ ಅಧಿಕಾರಿ ಡಿ.ರೂಪಾ ಅವರೇ ತೋರಿಸಿದ್ದಾರೆ. ಇದು ಪರಪ್ಪನ ಅಗ್ರಹಾರದಲ್ಲಿ ಮಾತ್ರವಲ್ಲ, ಪ್ರಪಂಚದಾದ್ಯಂತ ಜೈಲುಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ. ಅಮೆರಿಕಾದ ಜೈಲಲ್ಲೂ ಡ್ರಗ್ಸ್ ಎಲ್ಲಾ ಸಿಗುತ್ತೆ. ಇದು ನಾನು ಸರಿ ಅಂತ ಹೇಳ್ತಿಲ್ಲ. ಸಿಸ್ಟಂನಲ್ಲಿರುವ ಸಮಸ್ಯೆ ಎಂದಿದ್ದಾರೆ.

ದರ್ಶನ್ ಫೋಟೋ ವೈರಲ್ ಆಗುತ್ತಿದ್ದಂತೆ ಪರಪ್ಪನ ಅಗ್ರಹಾರದಲ್ಲೂ ಸಾಕಷ್ಟು ಬದಲಾವಣೆಯಾಗಿದೆ. ಡಿಐಜಿಗಳ ಬದಲಾವಣೆಯಾಗಿದೆ. ಡಿಐಜಿಯಾಗಿ ದಿವ್ಯಶ್ರೀ ಹಾಗೂ ಮುಕಜ್ಯ ಅಧೀಕ್ಷಕರಾಗಿ ಕೆ ಸುರೇಶ್ ಅವರನ್ನು ನೇಮಕ ಮಾಡಲಾಗಿದೆ. ದರ್ಶನ್ ಅವೆಇಗೆ ರಾಜಾತಿಥ್ಯ ಸಿಗುತ್ತಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದು, ಅಧಿಕಾರಿಗಳನ್ನು ನೇಮಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!