Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೇಸಿಗೆ ಬಂತು : ಕಲ್ಲಂಗಡಿ ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

Facebook
Twitter
Telegram
WhatsApp

ಈ ಬಾರಿಯಂತೂ ಬೇಸಿಗೆ ಅವಧಿಗೂ ಮುನ್ನವೇ ಶುರುವಾಗಿದೆ. ಮಳೆಯ ಅಭಾವದಿಂದ ಬೇಸಿಗೆ ಜೋರಾಗಿದೆ. ಎಲ್ಲೆಡೆ ಮಳೆಯಿಲ್ಲದೆ ನೆಲ ಬಿಸಿಯಾಗಿದೆ. ಕೆರೆ ಕಟ್ಟೆಗಳು ಒಣಗಿ ನಿಂತಿವೆ. ಭೂಮಿಯ ತಾಪ ಜಾಸ್ತಿಯಾಗಿ, ಅವಧಿಗೂ ಮುನ್ನವೆ ಹೆಚ್ಚಿನ ಶಾಕ ಜನರ ಮೈ ತಾಕುತ್ತಿದೆ. ಈ ಬೇಸಿಗೆಯಲ್ಲಿ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದರಲ್ಲೂ ದೇಹಕ್ಕೆ ನೀರಿನ ಅಂಶ ಬಹಳಷ್ಟು ಬೇಕಾಗಿರುತ್ತದೆ. ಹೀಗಾಗಿ ಕಲ್ಲಂಗಡಿ ಹಣ್ಣನ್ನು ಹೆಚ್ಚಿನದಾಗಿ ಸೇವಿಸಿ.

ಕಲ್ಲಂಗಡಿ ಹಣ್ಣು ಕೇವಲ ಬೇಸಿಗೆಯ ತಂಪನ್ನು ಮಾತ್ರ ನಿವಾರಿಸುವುದಿಲ್ಲ. ಹಲವು ಆರೋಗ್ಯಕರ ಲಾಭಗಳನ್ನು ಪಡೆಯಬಹುದಾಗಿದೆ. ಕಲ್ಲಂಗಡಿ ಹಣ್ಣು ತಿನ್ನುವುದರಿಂದ ದೇಹಕ್ಕೂ ತಂಪು, ಆಯಾಸವೂ ಕಡಿಮೆ, ಉಷ್ಣತೆಯ‌ ನಿಯಂತ್ರಣವೂ ಕಡಿಮೆಯಾಗುತ್ತೆ, ಚರ್ಮದ ಕಾಂತಿಯೂ ಹೆಚ್ಚುತ್ತದೆ.

 

* ಕಲ್ಲಂಗಡಿ ಹಣ್ಣು ಸೇವನೆಯಿಂದ ಹೃದಯದ ಆರೋಗ್ಯಕ್ಕೂ ಒಳ್ಳೆಯದು. ಇದರಲ್ಲಿ ಸಿಟ್ರುಲಿನ್ ಎಂಬ ಅಮೈನೋ ಆಮ್ಲದಿಂದಾಗಿ ದೇಹದಲ್ಲಿ ಉತ್ತಮ ರಕ್ತ ಸಂಚಾರವಾಗುತ್ತದೆ. ಇದರಿಂದ ಹೃದಯ ಉತ್ತಮವಾಗಿರುತ್ತದೆ.

* ಕಲ್ಲಂಗಡಿ ಹಣ್ಣಿನಿಂದ ಕೀಲುಗಳ ರಕ್ಷಣೆಯನ್ನು ಮಾಡಿಕೊಳ್ಳಬಹುದು. ಬೀಟಾ-ಕ್ರಿಪ್ಟೋಕ್ಸಾಂಥಿಯಾ ಎಂಬ ದ್ರವ್ಯ ಇರುತ್ತೆ. ಆ ದ್ರವ್ಯದಲ್ಲಿ ಕೀಲು ರಕ್ಷಣೆಯಾಗಲಿದೆ. ಕೀಲುಗಳಲ್ಲಿ ಉರಿಯೂರವಿದ್ದರೆ, ಸಂಧಿವಾತವಿದ್ದರೆ ಕಲ್ಲಂಗಡಿ ಹಣ್ಣಿನ ಸೇವನೆಯಿಂದ ಶಮನವಾಗಲಿದೆ.

* ಮುಖ್ಯವಾಗಿ ಕಣ್ಣುಗಳ ರಕ್ಷಣೆಯಾಗಬೇಕೆಂದರು ಕಲ್ಲಂಗಡಿ ಹಣ್ಣು ತಿನ್ನಬಹುದು. ವಿಟಮಿನ್ ಎ ಅಧಿಕಾವಾಗಿರುವ ಕಾರಣ, ಒಂದು ಪೀಸ್ ಕಲ್ಲಂಗಡಿ ಹಣ್ಣು ತಿಂದರು ಸಹ ಶೇಕಡಾ 9-10 ರಷ್ಟು ವಿಟಮಿನ್ ಎ ಸಿಗಲಿದೆ.

* ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಕಲ್ಲಂಗಡಿಯಲ್ಲಿ ಗ್ಲೈಸೆಮೆಕ್ಸ್ ಇಂಡೆಕ್ಸ್ ಮೌಲ್ಯವನ್ನು ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆ‌ಮಟ್ಟವನ್ನು ನಿಯಂತ್ರಣದಲ್ಲಿಡಲು ಅನುಕೂಲವಾಗಿದೆ. ಹೀಗಾಗಿ ಬೇಸಿಗೆಯಲ್ಲಿ ತಂಪಾಗಿರುವುದಕ್ಕಷ್ಟೇ ಅಲ್ಲ, ಆರೋಗ್ಯ ಕಾಪಾಡಿಕೊಳ್ಳುವುದಕ್ಕೂ ಕಲ್ಲಂಗಡಿ ಸೇವಿಸಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!