Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿರು ಬಿಸಿಲಿಗೆ ಬೆಂದಿದ್ದ ಸಿಲಿಕಾನ್ ಸಿಟಿ ಮಂದಿಗೆ ವರುಣ ಸ್ಪರ್ಶ

---Advertisement---

ಬೆಂಗಳೂರು; ಈ ಬಾರಿ ಬೇಸಿಗೆ ಶುರುವಾಗುವುದಕ್ಕೂ ಮುನ್ನವೇ ಬಿಸಿಲಿನ ತಾಪ ಎಲ್ಲರನ್ನ ಸುಡುವುದಕ್ಕೆ ಶುರುವಾಗಿತ್ತು. ಆದರೆ ಇಂದು ಮಳೆರಾಯನ ಸ್ಪರ್ಶದಿಂದ ಕೊಂಚ ಭುವಿ ತಂಪಾಗಿರೋದಲ್ಲದೆ ಜನರು ಕೂಡ ತಂಪಾಗಿದ್ದಾರೆ. ಶೆಕೆಯಿಂದ ಬೆವರುತ್ತಿದ್ದ ಜನ ಸದ್ಯ ತಣ್ಣನೆ ಗಾಳಿಗೆ ಮೈಯೊಡ್ಡಿ ಖುಷಿಯಾಗಿದ್ದಾರೆ. ಸಂಜೆಯಾಗುತ್ತಲೆ, ಸಿಲಿಕಾನ್ ಸಿಟಿಯಾದ್ಯಂತ ಮಳೆರಾಯ ಸುರಿದಿದ್ದಾನೆ.

ಬೆಂಗಳೂರಿನ ಹೆಚ್ಎಎಲ್, ಮಾರತಳ್ಳಿ, ವೈಟ್ ಫೀಲ್ಡ್, ಲಾಲ್ ಬಾಗ್, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಕವೆಡೆ ಮಳೆಯಾಗಿದೆ. ಮಾರ್ಚ್ 14ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಸೋ ನಾಳೆಯಿಂದ ಹೊರಗೆ ಹೋಗುವವರು ಕೊಡೆ ತೆಗೆದುಕೊಂಡು ಹೋಗಿ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಭಾಗದಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ.

2025ರ ಮೊದಲ ಮಳೆಯಾಗಿದೆ. ಇಂದು ಮಧ್ಯಾಹ್ನದ ಹೊತ್ತಿಗೆ ನಗರದಾದ್ಯಂತ ಮೋಡ ಕವಿದ ವಾತಾವರಣ ಸೃಷ್ಟಿಯಾಗಿತ್ತು. ರಾತ್ರಿಯಾಗುತ್ತಿದ್ದಂತೆ ಜೋರು ಮಳೆಯಾಗಿದೆ. ಮಳೆ ಕಂಡು ಜನ ಹರ್ಷಗೊಂಡಿದ್ದಾರೆ. ಹಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಇನ್ನು ಎರಡ್ಮೂರು ದಿನಗಳ ಕಾಲ ಮಳೆಯಾಗಲಿದೆ. ಇನ್ನು ತಾಪಮಾನ ಕೂಡ ಇಳಿಕೆಯಾಗಿದೆ. ಸಂಜೆ ವೇಳೆಗೆ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಗೆ ಇಳಿಕೆಯಾಗಿದೆ. ಗರಿಷ್ಠ ತಾಪಮಾನ 31ಕ್ಕೆ ಇಳಿಕೆಯಾಗಿದೆ. ಸಮುದ್ರದ ಮೇಲ್ಮೈನಲ್ಲಿ ಉಂಟಾಗಿರುವ ಹವಮಾನ ವೈಪರೀತ್ಯದಿಂದ ತಮಿಳುನಾಡು, ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...