Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಹ್ಯಾಕಾಶದಲ್ಲೇ ಕ್ರಿಸ್ಮಸ್ ಆಚರಿಸಿದ ಸುನಿತಾ ವಿಲಿಯಮ್ಸ್..!

---Advertisement---

ಸುನೀತಾ ವಿಲಿಯಮ್ಸ್‌ ಹಾಗೂ ಡಾನ್ ಪೆಟ್ಟಿಟ್ ಬಾಹ್ಯಾಕಾಶದಲ್ಲಿಯೇ ಕ್ರಿಸ್ಮಸ್ ಆಚರಣೆ ಮಾಡಿದ್ದಾರೆ. ಸದ್ಯ ನಾಡಿನೆಲ್ಲೆಡೆ ಕ್ರಿಸ್ಮಸ್ ಹಬ್ಬದ ಸಂಭ್ರಮ ಮನೆ ಮಾಡಿದೆ. ತಯಾರಿಯೂ ನಡೆಯುತ್ತಿದೆ. ಹೀಗಾಗಿ ಇಬ್ಬರು ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿಯೇ ಆಚರಣೆಯನ್ನು ಮಾಡಿದ್ದಾರೆ. ಈ ಹಿಂದೆ ದೀಪಾವಳಿ ಹಬ್ಬವನ್ನು ಅಚರಣೆ ಮಾಡಿ, ನಾಸಾಗೆ ಫೋಟೋ ಕಳುಹಿಸಿದ್ದರು.

ಸುನೀತಾ ವಿಲಿಯಮ್ಸ್ ಕೇವಲ ಹದಿನೈದು ದಿನಕ್ಕೆಂದು ಬಾಹ್ಯಾಕಾಶಕ್ಕೆ ತೆರಳಿದ್ದರು. ಜೂನ್ ಐದರಂದು ಬಾಹ್ಯಾಕಾಶಕ್ಕೆ ತೆರಳಿದ್ದರು. ಇಲ್ಲಿಯವರೆಗೂ ಭೂಮಿಗೆ ಬರಲು ಆಗದೆ ಸಂಕಟ ಪಡುತ್ತಿದ್ದಾರೆ. ತಾಂತ್ರಿಕ ದೋಷದಿಂದ ಅಲ್ಲಿಯೇ ಉಳಿಯುವಂತೆ ಆಗಿದೆ. ಫೆಬ್ರವರಿ 2025ಕ್ಕೆ ಭೂಮಿಗೆ ಬರುವ ನಿರೀಕ್ಷೆ ಇದೆ. ನಾಸಾ ಕೂಡ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ. ಖುಷಿ ವಿಚಾರ ಏನು ಅಂದ್ರೆ ಸುನೀತಾ ವಿಲಿಯಮ್ಸ್ ತಮಗೆ ಬೇಕಾದ ಅಡುಗೆ ಮಾಡಿಕೊಳ್ಳುವ ವ್ಯವಸ್ಥೆ ಅವರಿರುವಲ್ಲಿ ಅಗಿದೆ. ಇಷ್ಟು ದಿನ ಹೈಪ್ರೋಟೀ‌ನ್ ಮಾತ್ರೆಗಳಿಂದಾನೇ ಬದುಕಿದ್ದರು.

ಇಂದು (ಮಂಗಳವಾರ) ಅಂತರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿಯೇ ಕ್ರಿಸ್ಮಸ್ ಆಚರಣೆ ಮಾಡಿದ್ದಾರೆ. ಆ ಫೋಟೋಗಳನ್ನು ನಾಸಾ ಹಂಚಿಕೊಂಡಿದೆ. ಅನದರ್ ಡೇ.. ಅನದರ್ ಸ್ಲೇ ಎಂಬ ಅಡಿ ಬರಹವನ್ನು ನೀಡಲಾಗಿದೆ. ಕ್ರಿಸ್ಮಸ್ ಹಬ್ಬದ ಆಚರಣೆಯ ಜೊತೆಗೆ ವಿಶೇಷ ಅಡುಗೆಯನ್ನು ತಯಾರು ಮಾಡಿಕೊಂಡಿದ್ದಾರೆ‌. ರೊಬೊಟಿಕ್ ಕಾರ್ಬೋ ಮೆಷಿನ್ ಮೂಲಕ ಇವರು ತಮ್ಮ ಅಡುಗೆಯನ್ನು ತಾವೇ ರೆಡಿ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಆಹಾರ ತಯಾರಿಕೆಗೆ ಬೇಕಾದ ತಾಜಾ ಪದಾರ್ಥಗಳು ಕೂಡ ರವಾನೆಯಾಗುತ್ತಿದೆ. ಅಷ್ಟೇ ಅಲ್ಲ ಸುನೀತಾ ವಿಲಿಯನ್ಸ್ ಹಾಗೂ ಇನ್ನೊಬ್ಬ ಗಗನಯಾತ್ರಿಯೂ ತಮ್ಮ ಕುಟುಂಬದವರ ಜೊತೆಗೆ ವಿಡಿಯೋ ಕಾಲ್ ಮೂಲಕ ಸಂಪರ್ಕದಲ್ಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment