ಸುನೀತಾ ವಿಲಿಯಮ್ಸ್ ಭೂಮಿಗೆ ಬಂದ ಮೇಲೆ ಎದುರಾಗಲಿವೆ ಈ ಆರೋಗ್ಯ ಸಮಸ್ಯೆ..!

 

 

ಬೆಂಗಳೂರು; ಕಡೆಗೂ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಬರುವ ಸಮಯ ಹತ್ತಿರವಾಗಿದೆ. ಆದರೆ ಕಳೆದ ಒಂಭತ್ತು ತಿಂಗಳಿನಿಂದ ಬಾಹ್ಯಾಕಾಶದ ವಾತಾವರಣಕ್ಕೆ ಹೊಂದಿಕೊಂಡಿರುವ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಬಂದಾಕ್ಷಣವೇ ಇಲಗಲಿನ ವಾತಾವರಣಕ್ಕೆ ಹೊಂದಿಕೊಳ್ಳುವುದಿಲ್ಲ. ಅದಕ್ಕೆ ಸಾಕಷ್ಟು ಸಮಯ ಬದಲಾಗುತ್ತದೆ. ಅವರಿಗೆ ಕಾಡುವ ಸಮಸ್ಯೆಗಳೇನು ಎಂಬ ಮಾಹಿತಿ ಇಲ್ಲಿದೆ.

ಈಗಂತೂ ಇಬ್ಬರ ಪಾದಗಳು ಮಗುವಿನಂತೆ ಸ್ಮೂಥ್ ಆಗಿರುತ್ತವೆ. ಯಾಕಂದ್ರೆ ಒಂಭತ್ತು ತಿಂಗಳು ಪಾದವನ್ನು ನೆಲಕ್ಕೆ ಇಟ್ಟಿಲ್ಲ. ತೇಲಾಡಿಕೊಂಡೆ ಇದ್ದ ಕಾರಣ, ಭೂಮಿಗೆ ಬಂದ ಮೇಲೂ ಅದೇ ಅನುಭವವಾಗುತ್ತದೆ. ದೇಹ ಭಾರವಿದೆ ಎಂಬ ಅನುಭವವೇ ಅವರಿಗೆ ಆಗುವುದಿಲ್ಲ. ದೇಹದ ಚರ್ಮವೂ ಮಾಮೂಲಿಯಂತೆ ಇರುವುದಿಲ್ಲ. ಮೂಳೆಯ ಸಾಂಧ್ರತೆ ಹಾಗೂ ದ್ನಾಯು ಕ್ಷೀಣತೆಯ ಸಮಸ್ಯೆಯನ್ನು ಅವರು ಅನುಭವಿಸಿರುತ್ತಾರೆ. ಭೂಮಿಯ ಗುರುತ್ವಾಕರ್ಷಣೆಯೇ ಬೇರೆ ಬಾಹ್ಯಾಕಾಶದ ಗುರುತ್ವಾಕಾರ್ಷಣೆಯೇ ಬೇರೆ. ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಎದುರಾಗಿರುತ್ತದೆ, ಕಣ್ಣಿನಾ ರೇಟಿನಾ ಭಾಗಕ್ಕೂ ಸಮಸ್ಯೆ ಆಗಿರುತ್ತದೆ, ಶ್ವಾಸ ಕೋಶ, ಮೂತ್ರಪಿಂಡ, ಹೃದಯ, ಮೆದುಳಿಗೂ ಸಮಸ್ಯೆಯಾಗಿರುತ್ತದೆ.

ಹೀಗಾಗಿ ಸುನೀತಾ ವಿಲಿಯಮ್ಸ್ ಭೂಮಿಗೆ ಬಂದ ಮೇಲೆ ಹೊಂದಿಕೊಳ್ಳಲು ಸಮಯ ತೆಗೆದುಕೊಳ್ಳುತ್ತಾರೆ. ಇದಕ್ಕೆ ಬಾಹ್ಯಾಕಾಶ ಸಂಸ್ಥೆಗಳೆ ಪುನರ್ವಸತಿ ಕೇಂದ್ರಗಳನ್ನ ತೆರೆಯುತ್ತಾರೆ. ಅಲ್ಲಿ ಗಗನಾಯಾತ್ರಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ದೈನಂದಿನ ವ್ಯಾಯಾಮ, ಬ್ಯಾಲೆನ್ಸ್ ಕಾಯ್ದುಕೊಳ್ಳಲು ತರಬೇತಿ, ಆಹಾರ, ಅಗತ್ಯ ಔಷಧಿಗಳನ್ನು ದೇಹದ ಪರಿಸ್ಥಿತಿಗೆ ಅನುಗುಣವಾಗಿ ನೀಡುವುದು. ನಾಸಾ ವೈದ್ಯಕೀಯ ತಂಡದಿಂದ ನಿರಂತರ ಮೇಲ್ವಿಚಾರಣೆ ಮೂಲಕ ಅವರ ಆರೋಗ್ಯದ ಕಡೆಗೆ ಗಮನ ಹರಿಸುತ್ತಾರೆ. ಸಹಜ ಸ್ಥಿತಿಗೆ ಅವರ ಆರೋಗ್ಯ ತರಲು ಪ್ರಯತ್ನಿಸುತ್ತಾರೆ.

suddionenews

Recent Posts

ಪ್ರತಿದಿನ 30 ನಿಮಿಷಗಳ ಕಾಲ ವಾಕ್ ಮಾಡಿದರೆ ಎಷ್ಟೊಂದು ಆರೋಗ್ಯ ಪ್ರಯೋಜನಗಳು ಗೊತ್ತಾ ?

ಸುದ್ದಿಒನ್ : ವಾಕಿಂಗ್ ಮಾಡುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಪ್ರತಿದಿನ 30 ನಿಮಿಷಗಳ ವಾಕ್ ಆರೋಗ್ಯಕ್ಕೆ ಎಷ್ಟು…

7 minutes ago

ಈ ರಾಶಿಯವರು ಹೊಸದಾಗಿ ವ್ಯಾಪಾರ ಪ್ರಾರಂಭ ಮಾಡಿದ್ದಾರೆ ಕೈಹಿಡಿದರೆ ಸಾಕು

ಈ ರಾಶಿಯವರು ಹೊಸದಾಗಿ ವ್ಯಾಪಾರ ಪ್ರಾರಂಭ ಮಾಡಿದ್ದಾರೆ ಕೈಹಿಡಿದರೆ ಸಾಕು, ಈ ರಾಶಿಯವರು ಮದುವೆಯಾಗಿ ತಿಂಗಳಾಯಿತು ಕಲಹಗಳು ಶುರು, ಮಂಗಳವಾರದ…

3 hours ago

ಹುಬ್ಬಳ್ಳಿಯಲ್ಲಿ ಕಣ್ಣೀರುಡುತ್ತಾ ಜೈನ ಮುನಿ ಸರ್ಕಾರಕ್ಕೆ ಹೇಳಿದ್ದೇನು..?

ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…

12 hours ago

ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ; ಅಶ್ವಿನಿ ಅವರಿಂದ ವಿಶೇಷ ಕಾರ್ಯಕ್ಕೆ ಚಾಲನೆ

ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…

13 hours ago

ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ : ಎನ್.ಎಸ್.ಮಂಜುನಾಥ

  ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…

14 hours ago

ಅಗ್ನವೀರ್ ನೇಮಕಾತಿ ಅರ್ಜಿ ಆಹ್ವಾನ

ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…

14 hours ago