Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ವಿದ್ಯಾರ್ಥಿನಿ ಭವಿಷ್ಯದ ಜೊತೆಗೆ ಮೇಲ್ವಿಚಾರಕ ಆಟ : 7 ಮಾರ್ಕ್ಸ್ ಗೆ ಹೊಣೆ ಯಾರು..?

---Advertisement---

ದಾವಣಗೆರೆ; ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿಗಳ ಬದುಕಿಗೆ ಬಹಳ ಮುಖ್ಯವಾದದ್ದು. ತಮ್ಮ ಭವಿಷ್ಯ ರೂಪಿಸಿಕೊಳ್ಳುವುದಕ್ಕೆ ಈ ಎರಡು ಪರೀಕ್ಷೆಗಳು ಬಹಳ ಮುಖ್ಯವಾಗುತ್ತವೆ. ಆದರೆ ಶಿಕ್ಷಕರೇ ಆಗಲಿ, ಪರೀಕ್ಷಾ ಕೊಠಡಿಯಲ್ಲಿ ಮೇಲ್ವಿಚಾರಕರೇ ಆಗಲಿ ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡಬಾರದು. ಆದರೆ ದಾವಣಗೆರೆಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ.

ಹೌದು ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಶುರುವಾಗಿವೆ‌. ಇಂದು ಸೈನ್ಸ್ ವಿಭಾಗದವರಿಗೆ ಗಣಿತ ವಿಷಯದ ಪರೀಕ್ಷೆ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರಿನ ಮಾಲತಿ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಜಗಳೂರಿನ ನಳಂದ ಪಿಯು ಕಾಲೇಜಿನ ಪಿಯು ಸೌಜನ್ಯ ಇಂದು ಪರೀಕ್ಷೆ ಬರೆಯುತ್ತಿದ್ದರು. ಪಿಯು ಪರೀಕ್ಷೆ ಎಂದರೆ ಸಾಮಾನ್ಯವಾಗಿಯೇ ವಿದ್ಯಾರ್ಥಿಗಳು ಹೆಚ್ಚು ಗಮನ ಕೊಟ್ಟು ಓದಿರುತ್ತಾರೆ. ಎಲ್ಲಾ ಪ್ರಶ್ನಡಗಳಿಗೂ ಉತ್ತರ ಬರೆಯುವ ವಿದ್ಯಾರ್ಥಿಗಳಿಗೆ ಅಡಿಷನಲ್ ಶೀಟ್ ಅವಶ್ಯಕತೆ ಇರುತ್ತದೆ. ಆಲ್ಮೋಸ್ಟ್ ಎಲ್ಲಾ ವಿದ್ಯಾರ್ಥಿಗಳು ಅಡಿಷನಲ್ ಶೀಟ್ ತೆಗೆದುಕೊಂಡೆ ಪರೀಕ್ಷೆ ಬರೆಯುತ್ತಾರೆ.

ಸೌಜನ್ಯ ಕೂಡ ಪರೀಕ್ಷೆ ಬರೆಯುವಾಗ ಅಡಿಷನಲ್ ಶೀಟ್ ಕೇಳಿದ್ದಾರೆ. ಆದರೆ ಮೇಲ್ವಿಚಾರಕ ಆ ಶೀಟ್ ಗಳನ್ನ ನೀಡಿಲ್ಲ. ಸುಮಾರು ಏಳು ಅಂಕಗಳಿಗೆ ಉತ್ತರ ಗೊತ್ತಿದ್ದರು, ಬರೆಯುವುದಕ್ಕೆ ಶೀಟ್ ಇಲ್ಲ. ಸಮಯ ಮುಗಿದ ಮೇಲೆ ಆ ವಿದ್ಯಾರ್ಥಿನಿ ಹಾಗೇ ಪೇಪರ್ ಕೊಟ್ಟು ಬಂದಿದ್ದಾಳೆ. ಹೊರಗೆ ಬಂದು ತನ್ನ ತಾಯಿ ಬಳಿ ಹೇಳಿಕೊಂಡು ಕಣ್ಣೀರು ಹಾಕಿದ್ದಾಳೆ. ಪರೀಕ್ಷೆಗಳ ಒಂದೊಂದು ಮಾರ್ಕ್ಸ್ ಕೂಡ ಬಹಳ ಮುಖ್ಯವಾಗುತ್ತದೆ. ಆದರೆ ಏಳು ಮಾರ್ಕ್ಸ್ ಗೆ ಉತ್ತರ ಬರೆಯುವ ಅವಕಾಶವಿಲ್ಲ ಎಂದರೆ ಆ ವಿದ್ಯಾರ್ಥಿನಿ ಮನಸ್ಸು ಹೇಗಾಗಿರುತ್ತದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment