Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಲ್ಮೀಕಿ ಹಗರಣದಲ್ಲಿ ಅಧೀಕ್ಷಕ ಆತ್ಮಹತ್ಯೆಗೆ ಕೇಸ್ : ಇಬ್ಬರು ಅಧಿಕಾರಿಗಳು ಅರೆಸ್ಟ್

Facebook
Twitter
Telegram
WhatsApp

 

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಅಧಿಕಾರಿಗಳ ಅರೆಸ್ಟ್ ಮಾಡಲಾಗಿದೆ.

ವಾಲ್ಮೀಕಿ ನಿಗಮದ ಹಗರಣದಲ್ಲಿ 89 ಕೋಟಿಯ ಅವ್ಯವಹಾರದ ಹಗರಣ ಕೇಳಿ ಬಂದಿತ್ತು. ಈ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇದೆ. ಈ ಸಂಬಂಧ ವಾಲ್ಮೀಕಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಎಸ್ಐಟಿಗೆ ವಹಿಸಿದೆ. ತನಿಖೆಯಲ್ಲಿ ಈಗಾಗಲೇ ನಿಗಮದ ಖಾತೆಯಿಂದ ಆರ್ಬಿಎಲ್ ಬ್ಯಾಂಕ್ ನಲ್ಲಿರುವ ಹತ್ತು ಖಾಸಗಿ ಕಂಪನಿಗಳು ಹಾಗೂ ಎಂಟು ವ್ಯಕ್ತಿಗಳ ವೈಯಕ್ತಿಕ ಖಾತೆಗಳಿಗೆ 89.62 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ. ಈ ಹಗರಣ ಬೆಳಕಿಗೆ ಬಂದ ಬಳಿಕ ವಾಲ್ಮೀಕಿ ನಿಗಮದ ಅಧಿಕಾರಿಗಳು ನಾಪತ್ತೆಯಾಗಿದ್ದರು.

ಆದರೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ನಿನ್ನೆ ರಾತ್ರಿಯೇ ಇಬ್ಬರು ಅಧಿಕಾರಿಗಳನ್ನು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಪದ್ಮನಾಭ್ ಹಾಗೂ ಪರಶುರಾಮ್ ಬಂಧಿತ ಆರೋಪಿಗಳಾಗಿದ್ದಾರೆ. ಇಂದು ಮಧ್ಯಾಹ್ನ ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂಬ ಮಾಹಿತಿ ಇದೆ. ಕೋರ್ಟ್ ನಲ್ಲಿ ಕಸ್ಟಡಿಗೆ ನೀಡುವ ಬಗ್ಗೆ ಮನವಿ ಮಾಡಲಿದ್ದು, ಬಳಿಕ ತನಿಖೆಯನ್ನು ನಡೆಸಲಿದೆ ಎನ್ನಲಾಗಿದೆ.

ಈ ಹಗರಣದ ಬಗ್ಗೆ ಈಗಾಗಲೇ ಸಚಿವ ನಾಗೇಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ. ಇದು ನನ್ನ ಗಮನಕ್ಕೆ ಬಂದಿಲ್ಲ. ಕೇಳಿ ಶಾಕ್ ಆಗಿದೆ ಅಂತ. ಇನ್ನು ವಿಪಕ್ಷಗಳು ಸರ್ಕಾರದ ಮೇಲೆ ಹೌಹಾರಿದ್ದು, ನಿಗಮಕ್ಕೆ ಸಂಬಂಧಪಟ್ಟ ಸಚಿವರ ತಲೆದಂಡವಾಗಬೇಕು ಎಂದು ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!