Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬಿಎಂಟಿಸಿ ಡಿಪೋಗೆ ಭೇಟಿಕೊಟ್ಟ ಸೂಪರ್ ಸ್ಟಾರ್ ರಜನೀಕಾಂತ್..!

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು : ಸದ್ಯ ರಾಜ್ಯದಲ್ಲೆಲ್ಲಾ ಜೈಲರ್ ಸದ್ದು ಜೋರಾಗಿದೆ. ರಿಲೀಸ್ ಆಗಿ ಹಲವು ದಿನಗಳಾದರೂ ತನ್ನ ನಾಗಲೋಟ ಮುಂದುವರೆಸಿದ. ರಜನೀಕಾಂತ್ ಫ್ಯಾನ್ಸ್, ಶಿವಣ್ಣನ ಫ್ಯಾನ್ಸ್ ಅಂತು ಸಿನಿಮಾ ನೋಡಿ‌ ನೋಡಿ ಖುಷಿ ಪಡುತ್ತಿದ್ದಾರೆ. ಬಹುಪರಾಕ್ ಹಾಕುತ್ತಿದ್ದಾರೆ. ಸಿನಿಮಾ ಇಷ್ಟು ಹೈಪ್ ಕ್ರಿಯೇಟ್ ಮಾಡಿರುವ ಬೆನ್ನಲ್ಲೇ ರಜನೀಕಾಂತ್ ಅಭಿಮಾನಿಗಳ ಮುಂದೆ ಬಂದರೆ ಹೇಗಿರುತ್ತೆ..?

ಇಂದು ತಮಿಳಿನ ಸೂಪರ್ ಸ್ಟಾರ್ ರಜನೀಕಾಂತ್ ದಿಢೀರನೇ ಬೆಂಗಳೂರಿನ ಜಯನಗರಕ್ಕೆ ಭೇಟಿ ನೀಡಿದ್ದಾರೆ. ಜಯನಗರ 4th ಬ್ಲಾಕ್ ನಲ್ಲಿರುವ ಬಿಎಂಟಿಸಿ ಡಿಪೋಗೆ ಭೇಟಿ ನೀಡಿದ್ದಾರೆ. ರಜನೀಕಾಂತ್ ಅವರನ್ನು ಕಂಡ ಬಿಎಂಟಿಸಿ ಡಿಪೋ ಸಿಬ್ಬಂದಿಗಳು ಫುಲ್ ಖುಷಿಯಾಗಿದ್ದಾರೆ. ಎಲ್ಲರೂ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ರಜನೀಕಾಂತ್ ಅವರು ಕೂಡ ಡಿಪೋದಲ್ಲೆಲ್ಲ ಓಡಾಡಿ, ಅಲ್ಲಿನ ಸಿಬ್ಬಂದಿಗಳನ್ನೆಲ್ಲಾ ಮಾತನಾಡಿಸಿದ್ದಾರೆ. ರಜನೀಕಾಂತ್ ಅವರಿಗೆ ಆ ಜಾಗ ತುಂಬಾ ಭಾವನಾತ್ಮಕವಾಗಿ ಕನೆಕ್ಟ್ ಆಗಿದೆ. ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ತಮಿಳಿನ ಸೂಪರ್ ಸ್ಟಾರ್ ರಜನೀಕಾಂತ್ ಈ ಮೊದಲು ಬೆಂಗಳೂರಿನಲ್ಲಿಯೇ ಬಸ್ ಕಂಡಕ್ಟರ್ ಆಗಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲನೆ ಮಾಡಿದ್ದಾರೆ. ಬಳಿಕ ಸಿನಿಮಾ ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡು ಈಗ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಜೈಲರ್ ಸಕ್ಸಸ್ ಬೆನ್ನಲ್ಲೇ ತಮ್ಮ ಡಿಪೋ ನೆನಪಾಗಿದೆ. ಹೀಗಾಗಿ ಜಯನಗರದ ಡಿಪೋಗೆ ಭೇಟಿ ನೀಡಿ, ಸಂತಸಗೊಂಡಿದ್ದಾರೆ. ಅಲ್ಲಿನ ಸಿಬ್ಬಂದಿಗಳು ಕೂಡ ರಜನೀಕಾಂತ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಡಿಪೋದಲ್ಲಿ ತೆಗೆಸಿಕೊಂಡ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!