ಮಾಜಿ ಸಚಿವ ಜನಾರ್ದನ್ ರೆಡ್ಡಿಗೆ ಬಳ್ಳಾರಿಗೆ ಹೋಗಲು ಅನುಮತಿ ನೀಡಿದ ಸುಪ್ರೀಂಕೋರ್ಟ್

1 Min Read

 

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಳ್ಳಾರಿಗೆ ಪ್ರವೇಶ ಪಡೆಯುವುದಕ್ಕೆ ಸಾಕಷ್ಟು ಪ್ರಯತ್ನಗಳ ನಡುವೆ ಇದೀಗ ಸುಪೀಂ ಕೋರ್ಟ್ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದೆ. ಒಂದು ತಿಂಗಳ ಮಟ್ಟಿಗೆ ಮಾತ್ರ ಬಳ್ಳಾರಿಯಲ್ಲಿ ಇರಬಹುದು ಎಂದು ಆದೇಶ ನೀಡಿದೆ.

ಈಗ ಬಳ್ಳಾರಿಗೆ ಹೋದರು ನವೆಂಬರ್ 6ರಂದು ಜನಾರ್ದನ್ ರೆಡ್ಡಿ ಬಳ್ಳಾರಿ ತೊರೆಯಬೇಕಾಗಿದೆ. ಸುಪ್ರೀಂ ಕೋರ್ಟ್ ಗಡುವಿನಂತೆ ನಡೆದುಕೊಳ್ಳಬೇಕು. ಬಳಿಕ ಪ್ರಕರಣದ ಇತ್ಯರ್ಥ ಆಗುವವರೆಗೂ ಬಳ್ಳಾರಿಗೆ ಹೋಗುವಂತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಮಗಳ ಮದುವೆಯನ್ನು ಜನಾರ್ದನ ರೆಡ್ಡಿ ಅದ್ದೂರಿಯಾಗಿ ಮಾಡಿದ್ದರು. ಈಗ ಮಗುವಿನ ತಾಯಿಯಾಗಿದ್ದಾರೆ. ಅವರನ್ನು ನೋಡಿಕೊಳ್ಳಬೇಕು ಎಂಬ ಕಾರಣದಿಂದ ಇತ್ತಿಚೆಗೆ ತಮ್ಮ ಮನೆ ದೇವರ ಮೊರೆ ಹೋಗಿದ್ದರು. ಮಗಳಿಗಾಗಿ ಬಳ್ಳಾರಿಗೆ ಹೋಗಲು ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಇದೀಗ ಆ ಮನವಿಯಂತೆ ಒಂದು ತಿಂಗಳ ಮಟ್ಟಿಗೆ ಅನುಮತಿಯನ್ನು ನೀಡಿದೆ.

ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿ ಜೈಲುವಾಸ ಅನುಭವಿಸಿದ್ದರು. ಬಳಿಕ 2015ರಲ್ಲಿ ಜಾಮೀನು ಪಡೆದು ಹೊರಗಿದ್ದು, ಆ ಪ್ರಕರಣದ ತನಿಖೆ ಇನ್ನು ನಡೆಯುತ್ತಿದೆ. ಆದಷ್ಟು ಬೇಗ ವಿಚಾರಣೆ ನಡೆಸಿ ಪ್ರಕರಣ ಇತ್ಯರ್ಥ ಮಾಡಿ ಎಂದು ಜನಾರ್ದನ ರೆಡ್ಡಿ ಕೂಡ ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *