ಮಾಜಿ ಸಚಿವ ಜನಾರ್ದನ್ ರೆಡ್ಡಿಗೆ ಬಳ್ಳಾರಿಗೆ ಹೋಗಲು ಅನುಮತಿ ನೀಡಿದ ಸುಪ್ರೀಂಕೋರ್ಟ್

 

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಳ್ಳಾರಿಗೆ ಪ್ರವೇಶ ಪಡೆಯುವುದಕ್ಕೆ ಸಾಕಷ್ಟು ಪ್ರಯತ್ನಗಳ ನಡುವೆ ಇದೀಗ ಸುಪೀಂ ಕೋರ್ಟ್ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದೆ. ಒಂದು ತಿಂಗಳ ಮಟ್ಟಿಗೆ ಮಾತ್ರ ಬಳ್ಳಾರಿಯಲ್ಲಿ ಇರಬಹುದು ಎಂದು ಆದೇಶ ನೀಡಿದೆ.

ಈಗ ಬಳ್ಳಾರಿಗೆ ಹೋದರು ನವೆಂಬರ್ 6ರಂದು ಜನಾರ್ದನ್ ರೆಡ್ಡಿ ಬಳ್ಳಾರಿ ತೊರೆಯಬೇಕಾಗಿದೆ. ಸುಪ್ರೀಂ ಕೋರ್ಟ್ ಗಡುವಿನಂತೆ ನಡೆದುಕೊಳ್ಳಬೇಕು. ಬಳಿಕ ಪ್ರಕರಣದ ಇತ್ಯರ್ಥ ಆಗುವವರೆಗೂ ಬಳ್ಳಾರಿಗೆ ಹೋಗುವಂತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಮಗಳ ಮದುವೆಯನ್ನು ಜನಾರ್ದನ ರೆಡ್ಡಿ ಅದ್ದೂರಿಯಾಗಿ ಮಾಡಿದ್ದರು. ಈಗ ಮಗುವಿನ ತಾಯಿಯಾಗಿದ್ದಾರೆ. ಅವರನ್ನು ನೋಡಿಕೊಳ್ಳಬೇಕು ಎಂಬ ಕಾರಣದಿಂದ ಇತ್ತಿಚೆಗೆ ತಮ್ಮ ಮನೆ ದೇವರ ಮೊರೆ ಹೋಗಿದ್ದರು. ಮಗಳಿಗಾಗಿ ಬಳ್ಳಾರಿಗೆ ಹೋಗಲು ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಇದೀಗ ಆ ಮನವಿಯಂತೆ ಒಂದು ತಿಂಗಳ ಮಟ್ಟಿಗೆ ಅನುಮತಿಯನ್ನು ನೀಡಿದೆ.

ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿ ಜೈಲುವಾಸ ಅನುಭವಿಸಿದ್ದರು. ಬಳಿಕ 2015ರಲ್ಲಿ ಜಾಮೀನು ಪಡೆದು ಹೊರಗಿದ್ದು, ಆ ಪ್ರಕರಣದ ತನಿಖೆ ಇನ್ನು ನಡೆಯುತ್ತಿದೆ. ಆದಷ್ಟು ಬೇಗ ವಿಚಾರಣೆ ನಡೆಸಿ ಪ್ರಕರಣ ಇತ್ಯರ್ಥ ಮಾಡಿ ಎಂದು ಜನಾರ್ದನ ರೆಡ್ಡಿ ಕೂಡ ಮನವಿ ಮಾಡಿದ್ದಾರೆ.

suddionenews

Recent Posts

ಭಾರತ – ಪಾಕ್ ಪಂದ್ಯಕ್ಕೆ ಕ್ಷಣಗಣನೆ : ಗೆದ್ದು ಬಾ ಇಂಡಿಯಾ : ಗೆಲುವಿಗಾಗಿ ವಿಶೇಷ ಪೂಜೆ…!

ಇಂದು ಭಾರತ ವರ್ಸಸ್ ಪಾಕ್ ಪಂದ್ಯ ನಡೆಯಲಿದೆ. ಸಾಂಪ್ರಾದಾಯಿಕ ವೈರಿಗಳನ್ನು ಕಟ್ಟಿ ಹಾಕಲು ಭಾರತ ತಂಡ ಸಜ್ಜಾಗಿದೆ. ಈ ಪಂದ್ಯವನ್ನ…

2 minutes ago

IND vs PAK: ಕೆಲಹೊತ್ತಿನಲ್ಲಿ ಭಾರತ-ಪಾಕ್ ಪಂದ್ಯ : ದುಬೈನಲ್ಲಿ ಹವಾಮಾನ ಹೇಗಿದೆ ? ಪಿಚ್ ವರದಿಯ ಸಂಪೂರ್ಣ ಮಾಹಿತಿ ಇಲ್ಲಿದೆ…!

ಸುದ್ದಿಒನ್ : ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಇಂದು ಮಧ್ಯಾನ್ಹ 2.30 ಕ್ಕೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ vs ಪಾಕಿಸ್ತಾನ…

3 hours ago

ಒಂದು ಕಪ್ ಬ್ಲಾಕ್ ಕಾಫಿಯಿಂದ ಹಲವು ಆರೋಗ್ಯ ಪ್ರಯೋಜನಗಳು..!

  ಸುದ್ದಿಒನ್ ಬ್ಲಾಕ್ ಕಾಫಿ ಹೃದಯದ ಆರೋಗ್ಯವನ್ನು ರಕ್ಷಿಸುವುದಲ್ಲದೆ, ಟೈಪ್ -2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.…

4 hours ago

ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ

ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ, ಈ ರಾಶಿಗಳ ಮದುವೆಗೆ ತುಂಬಾ ಅಡಚಣೆ, ಭಾನುವಾರ ರಾಶಿ ಭವಿಷ್ಯ 23 ಫೆಬ್ರವರಿ…

7 hours ago

ಚಿತ್ರದುರ್ಗ : ನಾಲ್ವರು ಶ್ರೀಗಂಧದ ಕಳ್ಳರ ಬಂಧನ : 7.78 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ

    ಸುದ್ದಿಒನ್, ಹಿರಿಯೂರು, ಫೆಬ್ರವರಿ. 22 : ಅಬ್ಬಿನಹೊಳೆ ಮತ್ತು ಹೊಸದುರ್ಗ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಶ್ರೀಗಂಧ…

15 hours ago