ರಾಜೀವ್ ಗಾಂಧಿ ಹಂತಕರ ಬಿಡುಗಡೆ :  ಸುಪ್ರೀಂ ಕೋರ್ಟ್ ನಡೆ ಸ್ವೀಕಾರಾರ್ಹವಲ್ಲ ಎಂದ ಕಾಂಗ್ರೆಸ್

suddionenews
1 Min Read

ಸುದ್ದಿಒನ್ ವೆಬ್ ಡೆಸ್ಕ್

ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯಲ್ಲಿ ಶಿಕ್ಷೆಗೊಳಗಾದ ಆರು ಮಂದಿ ಹಂತಕರನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸುತ್ತಿದ್ದಂತೆ ಇತ್ತ ಕಾಂಗ್ರೆಸ್ ಪಕ್ಷವು ಈ ಆದೇಶವನ್ನು “ದುರದೃಷ್ಟಕರ” ಮತ್ತು “ಸ್ವೀಕಾರಾರ್ಹವಲ್ಲ” ಎಂದು ಬಣ್ಣಿಸಿದೆ.

ಸುಪ್ರೀಂ ಕೋರ್ಟ್‌ನ ತೀರ್ಪಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಮತ್ತು ಸಂವಹನದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದಾರೆ.”ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹಂತಕರನ್ನು ಬಿಡುಗಡೆ ಮಾಡಿರುವ ಸುಪ್ರೀಂ ಕೋರ್ಟ್ ನ ನಿರ್ಧಾರವು ಸ್ವೀಕಾರಾರ್ಹವಲ್ಲ.

ರಾಜೀವ್ ಗಾಂಧಿಯವರು ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ನೆರೆಯ ಶ್ರೀಲಂಕಾದ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್‌ಟಿಟಿಇ) ಗುಂಪಿನ ಮಹಿಳಾ ಆತ್ಮಾಹುತಿ ಬಾಂಬರ್‌ನಿಂದ ಹತ್ಯೆಗೀಡಾಗಿದ್ದರು.

ನಳಿನಿ ಶ್ರೀಹರನ್ ಮತ್ತು ಇತರ ಐವರು ಅಪರಾಧಿಗಳನ್ನು 33 ವರ್ಷಗಳ ಜೈಲುವಾಸದ ನಂತರ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದೆ. ಇಂದು ಬಿಡುಗಡೆಯಾದ ಆರು ಮಂದಿಯಲ್ಲಿ ರಾಬರ್ಟ್ ಪಯಾಸ್, ಜಯಕುಮಾರ್ ಮತ್ತು ಮುರುಗನ್ ಶ್ರೀಲಂಕಾ ಪ್ರಜೆಗಳು.

ಮೇ ತಿಂಗಳಲ್ಲಿ, ಏಳನೇ ಅಪರಾಧಿ ಪೆರಾರಿವಾಲನ್‌ನನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿತ್ತು. ಅದೇ ಆದೇಶವು ಉಳಿದ ಅಪರಾಧಿಗಳಿಗೂ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

2000 ರಲ್ಲಿ, ರಾಜೀವ್ ಗಾಂಧಿ ಅವರ ಪತ್ನಿ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಒಪ್ಪಿಗೆಯ ಮೇರೆಗೆ ನಳಿನಿ ಶ್ರೀಹರನ್ ಅವರ ಶಿಕ್ಷೆಯನ್ನು ಜೀವಾವಧಿಗೆ ಇಳಿಸಲಾಗಿತ್ತು.

2014ರಲ್ಲಿ ಉಳಿದ ಆರು ಅಪರಾಧಿಗಳ ಶಿಕ್ಷೆಯನ್ನು ಕೂಡ ತಗ್ಗಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *