Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಥಗ್ ಲೈಫ್ ರಿಲೀಸ್ ಗೆ ಸುಪ್ರೀಂ ಕೋರ್ಟ್ ಸೂಚನೆ : ರಾಜ್ಯ ಸರ್ಕಾರ ಒದಗಿಸುತ್ತಾ ಭದ್ರತೆ..?

---Advertisement---

ಕಮಲ್ ಹಾಸನ್ ಅವರ ಥಗ್ ಲೈಫ್ ಇದೀಗ ಸುಪ್ರೀಂ ಕೋರ್ಟ್ ನಲ್ಲಿದೆ. ಇದೀಗ ಸುಪ್ರೀಂ ಕೋರ್ಟ್ ಥಗ್ ಲೈಫ್ ಪರವಾಗಿ ಆದೇಶ ನೀಡಿದೆ. ರಾಜ್ಯದಲ್ಲಿ ರಿಲೀಸ್ ಮಾಡುವುದಕ್ಕೆ ಅವಕಾಶ ಕೊಡಬೇಕೆಂದು ಸೂಚಿಸಿದೆ. ಥಗ್ ಲೈಫ್ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದು ಹೀಗೆ, ಗೂಂಡಾಗಳ ಗುಂಪು ಯಾವ ಸಿನಿಮಾವನ್ನು ಪ್ರದರ್ಶನ ಮಾಡಬೇಕು, ಯಾವ ಸಿನಿಮಾ ಪ್ರದರ್ಶನ ಮಾಡಬಾರದು ಎಂದಬುದನ್ನು ನಿರ್ಧರಿಸಲಾಗದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಯಾರಾದರೂ ಒಂದು ಹೇಳಿಕೆ ನೀಡಿದರೆ ಅದಕ್ಕೆ ವಿರುದ್ಧವಾಗಿ‌ ನೀವೂ ಹೇಳಿಕೆ ನೀಡಿ. ಆದರೆ ಚಿತ್ರಮಂದಿರಗಳನ್ನು ಸುಟ್ಟು ಹಾಕುತ್ತೇವೆ ಎಂದು ಬೆದರಿಸುವುದು ಕಾನೂನಿಗೆ ವಿರುದ್ಧ. ಕಮಲ್ ಹಾಸನ್ ಹೇಳಿಕೆಯನ್ನು ಒಪ್ಪುವುದು, ಒಪ್ಪದೆ ಇರುವುದು ಕರ್ನಾಟಕ ಜನತೆಗೆ ಬಿಟ್ಟಿದ್ದು. ಆದರೆ ಮೂಲಭೂತ ಹಕ್ಕುಗಳ ರಕ್ಷಣೆ ಆಗಲೇಬೇಕು. ಬೆಂಗಳೂರಿನ ಜಾಗೃತ ಜನತೆಗೆ ಕಮಲ್ ಹಾಸನ್ ಹೇಳಿಕೆ ತಪ್ಪಾದಲ್ಲಿ ಸರಿ ಯಾವುದು ಅದನ್ನ ಹೇಳಲಿ. ಆದರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ವುತ್ತೇವೆ ಎನ್ನುವುದು ಎಷ್ಟು ಸರಿ.

ಸಿಬಿಎಫ್ಸಿಯಿಂದ ಪ್ರಮಾಣ ಪತ್ರ ತೆಗೆದುಕೊಂಡ ಸಿನಿಮಾ ರಿಲೀಸ್ ಆಗಲೇಬೇಕು. ಸಿನಿಮಾ ನೋಡಬೇಕೆ ಬೇಡವೇ ಎಂಬುದು ಜನರಿಗೆ ಬಿಟ್ಟ ನಿರ್ಧಾರ. ಒತ್ತಾಯ ಪೂರ್ವಕವಾಗಿ ಸಿನಿಮಾ ಬಿಡುಗಡೆ ಮಾಡದಂತೆ ತಡೆಯವುದು ಸೂಕ್ತವಲ್ಲ ಎಂದೇ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಇದೀಗ ಸುಪ್ರೀಂ ಕೋರ್ಟ್ ಸಿನಿಮಾ ರಿಲೀಸ್ ಗೆ ಸೂಚನೆ ನೀಡಿದೆ. ಇತ್ತ ಕನ್ನಡ ಪರ ಹೋರಾಟಗಾರರು ಸಿನಿಮಾ ರಿಲೀಸ್‌ ಮಾಡುವುದಕ್ಕೆ ಬಿಡಲ್ಲ ಎಂದಿದ್ದಾರೆ. ಈಗ ರಾಜ್ಯ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತೆ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment