ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಜೆಡಿಎಸ್ ನಲ್ಲಿ ಕುಟುಂಬದಲ್ಲಿಯೇ ಟಿಕೆಟ್ ಫೈಟ್ ಶುರುವಾಗಿದೆ. ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧೆಗೆ ಇಳಿದಿದ್ದಾರೆ. ಆದ್ರೆ ಟಿಕೆಟ್ ವಿಚಾರದಲ್ಲಿ ಪರ ವಿರೋಧ ಕೇಳಿ ಬರುತ್ತಿದೆ. ಕುಮಾರಸ್ವಾಮಿ ಟಿಕೆಟ್ ಗೆ ಒಪ್ಪಿಗೆ ನೀಡುತ್ತಿಲ್ಲ. ಆ ಕಡೆ ಪತಿ ರೇವಣ್ಣ ಕಡೆಯಿಂದ ಟಿಕೆಟ್ ಗೆ ಒತ್ತಡ ಹಾಕುತ್ತಿದ್ದಾರೆ. ಇದರ ನಡುವೆ ಮಗ ಸೂರಜ್ ಕೂಡ ಅಮ್ಮನ ಪರವಾಗಿ ನಿಂತಿದ್ದಾರೆ. ಬಿಜೆಪಿ ನಾಯಕರು ಕೂಡ ಭವಾನಿ ರೇವಣ್ಣ ಅವರಿಗೆ ನಮ್ಮ ಪಕ್ಕಕ್ಕೆ ಬನ್ನಿ ಅಂತ ಕರೆಯುತ್ತಿದ್ದಾರೆ.
ಈ ವಿಚಾರ ಚರ್ಚೆಗೆ ಬರುತ್ತಿದ್ದಂತೆ ಹೆಚ್ ಡಿ ರೇವಣ್ಣ ಅವರು ಮೌನ ಮುರಿದಿದ್ದಾರೆ. ಕುಮಾರಸ್ವಾಮಿ ಹಾಗೂ ರೇವಣ್ಣರನ್ನು ಬೇರ್ಪಡಿಸುವುದಕ್ಕೆ ಆಗಲ್ಲ. ಬೇರ್ಪಡಿಸುತ್ತೇವೆ ಅಂತ ಯಾರಾದ್ರೂ ಎಂದುಕೊಂಡರೆ ಅದು ಭ್ರಮನಿರಸವಾಗಿರುತ್ತದೆ. ನಮ್ಮ ಜಿಲ್ಲೆಯ ಏಳು ಕ್ಷೇತ್ರದ ಟಿಕೆಟ್ ಅನ್ನು ದೇವೇಗೌಡ ಅವರು, ಕುಮಾರಸ್ವಾಮಿ ಅವರು, ಸಿ ಎಂ ಇಬ್ರಾಹಿಂ ಅವರೇ ತೀರ್ಮಾನಿಸುತ್ತಾರೆ ಎಂದಿದ್ದಾರೆ.
ಹಾಸನ ಜಿಲ್ಲೆ ಕಳೆದ ಹತ್ತು ವರ್ಷದಿಂದ ಅಭಿವೃದ್ಧಿಯಾಗಿಲ್ಲ. ಕುಮಾರಣ್ಣ ಬರದಿದ್ದರೆ ಹಾಸನದ ಆಸ್ಪತ್ರೆ ಆಗಲ್ಲ. ಕೆಲವರು ಹಾಸನ ಟಿಕೆಟ್ ಅನ್ನು ಭವಾನಿ ಅವರಿಗೆ ಕೊಡಿ ಅಂತಾರೆ, ಇನ್ನು ಕೆಲವರು ಬೇರೆಯವರಿಗೆ ಕೊಡಿ ಅಂತಾರೆ. ಅದನ್ನು ತೀರ್ಮಾನ ಮಾಡುವುದು ಪಕ್ಷ. ನಾನಾಗಲೀ, ಸೂರಜ್ ಆಗಲೀ, ರೇವಣ್ಣ ಆಗಲಿ ಅಲ್ಲ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್