ಜೆಡಿಎಸ್ ನಲ್ಲಿ ಕುಟುಂಬದಲ್ಲಿಯೇ ಟಿಕೆಟ್ ಫೈಟ್ ಶುರುವಾಗಿದೆ. ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧೆಗೆ ಇಳಿದಿದ್ದಾರೆ. ಆದ್ರೆ ಟಿಕೆಟ್ ವಿಚಾರದಲ್ಲಿ ಪರ ವಿರೋಧ ಕೇಳಿ ಬರುತ್ತಿದೆ. ಕುಮಾರಸ್ವಾಮಿ ಟಿಕೆಟ್ ಗೆ ಒಪ್ಪಿಗೆ ನೀಡುತ್ತಿಲ್ಲ. ಆ ಕಡೆ ಪತಿ ರೇವಣ್ಣ ಕಡೆಯಿಂದ ಟಿಕೆಟ್ ಗೆ ಒತ್ತಡ ಹಾಕುತ್ತಿದ್ದಾರೆ. ಇದರ ನಡುವೆ ಮಗ ಸೂರಜ್ ಕೂಡ ಅಮ್ಮನ ಪರವಾಗಿ ನಿಂತಿದ್ದಾರೆ. ಬಿಜೆಪಿ ನಾಯಕರು ಕೂಡ ಭವಾನಿ ರೇವಣ್ಣ ಅವರಿಗೆ ನಮ್ಮ ಪಕ್ಕಕ್ಕೆ ಬನ್ನಿ ಅಂತ ಕರೆಯುತ್ತಿದ್ದಾರೆ.
ಈ ವಿಚಾರ ಚರ್ಚೆಗೆ ಬರುತ್ತಿದ್ದಂತೆ ಹೆಚ್ ಡಿ ರೇವಣ್ಣ ಅವರು ಮೌನ ಮುರಿದಿದ್ದಾರೆ. ಕುಮಾರಸ್ವಾಮಿ ಹಾಗೂ ರೇವಣ್ಣರನ್ನು ಬೇರ್ಪಡಿಸುವುದಕ್ಕೆ ಆಗಲ್ಲ. ಬೇರ್ಪಡಿಸುತ್ತೇವೆ ಅಂತ ಯಾರಾದ್ರೂ ಎಂದುಕೊಂಡರೆ ಅದು ಭ್ರಮನಿರಸವಾಗಿರುತ್ತದೆ. ನಮ್ಮ ಜಿಲ್ಲೆಯ ಏಳು ಕ್ಷೇತ್ರದ ಟಿಕೆಟ್ ಅನ್ನು ದೇವೇಗೌಡ ಅವರು, ಕುಮಾರಸ್ವಾಮಿ ಅವರು, ಸಿ ಎಂ ಇಬ್ರಾಹಿಂ ಅವರೇ ತೀರ್ಮಾನಿಸುತ್ತಾರೆ ಎಂದಿದ್ದಾರೆ.
ಹಾಸನ ಜಿಲ್ಲೆ ಕಳೆದ ಹತ್ತು ವರ್ಷದಿಂದ ಅಭಿವೃದ್ಧಿಯಾಗಿಲ್ಲ. ಕುಮಾರಣ್ಣ ಬರದಿದ್ದರೆ ಹಾಸನದ ಆಸ್ಪತ್ರೆ ಆಗಲ್ಲ. ಕೆಲವರು ಹಾಸನ ಟಿಕೆಟ್ ಅನ್ನು ಭವಾನಿ ಅವರಿಗೆ ಕೊಡಿ ಅಂತಾರೆ, ಇನ್ನು ಕೆಲವರು ಬೇರೆಯವರಿಗೆ ಕೊಡಿ ಅಂತಾರೆ. ಅದನ್ನು ತೀರ್ಮಾನ ಮಾಡುವುದು ಪಕ್ಷ. ನಾನಾಗಲೀ, ಸೂರಜ್ ಆಗಲೀ, ರೇವಣ್ಣ ಆಗಲಿ ಅಲ್ಲ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…