Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಣ್ಣನಿಗೆ ಇಂದು ಸರ್ಜರಿ : ಚಿಕಿತ್ಸೆ ಯಶಸ್ವಿಯಾಗಲೆಂದು ಅಭಿಮಾನಿಗಳಿಂದ ಪೂಜೆ

---Advertisement---

ಬೆಂಗಳೂರು: ದೊಡ್ಮನೆಯ ನಂದಾದೀಪ.. ಕರುನಾಡ ಮಂದಿಯ ಪ್ರೀತಿಯ ಮುತ್ತು ಶಿವಣ್ಣನಿಗೆ ಬಹಳ ದಿನಗಳಿಂದ ಅನಾರೋಗ್ಯದ ಸಮಸ್ಯೆ ಇದೆ. ಇಷ್ಟು ದಿನ ಒಂದಷ್ಟು ಟ್ರೀಟ್ಮೆಂಟ್ ತೆಗೆದುಕೊಂಡಿದ್ದಾರೆ. ಆದರೆ ಒಂದು ಸರ್ಜರಿ ಮಾತ್ರ ಬಾಕಿ ಇದ್ದ ಕಾರಣ ಶಿವಣ್ಣ, ತಮ್ಮ ಕುಟುಂಬ ಸಮೇತ ಅಮೆರಿಕಾಗೆ ತೆರಳಿದ್ದಾರೆ. ಅಲ್ಲಿ ಇಂದು ಸರ್ಜರಿ ನಡೆಯಲಿದೆ. ಹೀಗಾಗಿ ಅಭಿಮಾನಿಗಳೆಲ್ಲ ಶಿವಣ್ಣ ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.

ಶಿವಣ್ಣನಿಗಾಗಿ ದೇವರ ಮೊರೆ ಹೋಗಿದ್ದಾರೆ. ಸರ್ಜರಿ ಯಶಸ್ವಿಯಾಗಿ ತವರಿಗೆ ಮರಳಲಿ ಎಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಿದ್ದಾರೆ. ವಿರೇಶ್ ಥಿಯೇಟರ್ ಬಳಿ ಇರುವ ನಾಗಸುಬ್ರಮಣ್ಯ ದೇವಸ್ಥಾನದಲ್ಲಿ ಶಿವಣ್ಣನ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಸ್ತುತ ಅಮೆರಿಕಾದಲ್ಲಿ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಶಿವಣ್ಣ ಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ದೇವಸ್ಥಾನಗಳಲ್ಲಿ ಶಿವಣ್ಣನ ಫೋಟೋ ಹಿಡಿದು, ದೇವರ ಬಳಿ ಪ್ರಾರ್ಥನೆ ಮಾಡಿದ್ದಾರೆ.

ಇನ್ನು ಶಿವಣ್ಣ ಅಮೆರಿಕಾಗೆ ಹೋಗುವುದಕ್ಕೂ ಮೊದಲೇ ಅವರ ಆಪ್ತರೆಲ್ಲ ಮನೆಗೆ ಬಂದು ಹಾರೈಸಿದ್ದರು. ಕೊಂಚ ಭಯಗೊಂಡಿದ್ದ ಶಿವಣ್ಣನಿಗೆ ಆತ್ಮಸ್ಥೈರ್ಯ ತುಂಬಿದರು. ಮನೆ ಮಂದಿಗೆಲ್ಲಾ ಧೈರ್ಯ ಹೇಳಿದರು. ಸುದೀಪ್, ಬಿಸಿ ಪಾಟೀಲ್ ಸೇರಿದಂತೆ ಎಲ್ಲರು ಜೊತೆಗಿದ್ದೀವಿ ಎಂಬ ವಿಶ್ವಾಸ ನೀಡಿದರು. ಇಂದು ಆಪರೇಷನ್ ನಡೆಯುತ್ತಿದ್ದು, ಒಂದು ತಿಂಗಳ ಕಾಲ ಶಿವಣ್ಣ ಅಮೆರಿಕಾದ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ. ಜನವರಿ 26ಕ್ಕೆ ಭಾರತಕ್ಕೆ ಬರಲಿದ್ದಾರೆ. ಶಿವಣ್ಣ ಜೊತೆಗೆ ಗೀತಾ ಶಿವರಾಜ್ಕುಮಾರ್ ಅವರು ಅಮೆರಿಕಾಗೆ ತೆರಳಿದ್ದು, ಜೊತೆಗೆ ಇದ್ದಾರೆ. ಸರ್ಜರಿ ಯಶಸ್ವಿಯಾಗಿ, ಆರೋಗ್ಯಯುತವಾಗಿ ಶಿವಣ್ಣ ಬರಲೆಂದು ನಾನಾ ದೇವಸ್ಥಾನಗಳಲ್ಲಿ ಪೂಜೆ ಮಾಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment