Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಸ್ತ್ರ ಚಿಕಿತ್ಸೆ ಯಶಸ್ವಿ.. ಚೆನ್ನೈನಿಂದ ಬೆಂಗಳೂರಿಗೆ ಕುಮಾರಸ್ವಾಮಿ: ವಿಶ್ರಾಂತಿ ಹೇಗೆ? ಪ್ರಚಾರ ಮಾಡ್ತಾರಾ..?

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಬೆಂಗಳೂರಿಗೆ ಬಂದಿಳಿದಿದ್ದಾರೆ. ಇದು ಮೂರನೆಯ ಬಾರಿಗೆ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಾರಿ ಶಸ್ತ್ತ ಚಿಕಿತ್ಸೆ ಚೆನ್ನಾಗಿ ಮಾಡಿದ್ದಾರೆ ಎಂದೇ ಹೇಳಿದ್ದಾರೆ. ಇನ್ನು ಲೋಕಸಭಾ ಚುನಾವಣೆ ಬೇರೆ ಸನಿಹವಿರುವ ಕಾರಣ, ಒಂದು ಕಡೆ ಆರೋಗ್ಯ ಮತ್ತೊಂದು ಕಡೆ ಚುನಾವಣೆಯ ಪ್ರಚಾರ ಎರಡನ್ನು ಬ್ಯಾಲೆನ್ಸ್ ಮಾಡುವ ಟಾಸ್ಕ್ ಕುಮಾರಸ್ವಾಮಿ ಅವರಿಗಿದೆ.

ಚೆನ್ನೈನಿಂದ ಬೆಂಗಳೂರಿಗೆ ಬಂದಿಳಿದಾಗ ಮಾತನಾಡಿದ ಅವರು, ಕಳೆದ ಎರಡು ಬಾರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದೀನಿ. ಎರಡು ಶಸ್ತ್ರಚಿಕಿತ್ಸೆಯಲ್ಲಿ ಲೋಪದೋಷವಾಗಿತ್ತು. ಆದ್ಋ ಈಗ ವೈದ್ಯಕೀಯ ಲೋಕ ತಾಂತ್ರಿಕವಾಗಿ ಮುಂದುವರೆದಿದೆ. ಹೀಗಾಗಿ ಅತ್ಯಾಧುನಿಕ ಶಸ್ತ್ರ ಚಿಕಿತ್ಸೆಯಿಂದ ಮೂರನೇ ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

 

ನಾಡಿನ ಜನರ ಶುಭ ಹಾರೈಕೆಯಿಂದ ಇಂದು ಗುಣಮುಖರಾಗಿ ಬಂದಿದ್ದೇನೆ. ನಾಡಿನ ಜನರ ಹಾರೈಕೆ, ದೇವರ ಆಶೀರ್ವಾದದಿಂದ ಇಂದು ಚೇತರಿಸಿಕೊಂಡಿದ್ದೀನಿ. ವೈದ್ಯರು ಸಾಯಿಬಾಬಾ ಭಕ್ತರು. ದೇವರಿಗೆ ಪೂಜೆ ಮಾಡಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಇನ್ನು ಮೂರ್ನಾಲ್ಕು ದಿನದಲ್ಲಿ ತೀರ್ಮಾನ ಮಾಡಿ ತಿಳಿಸುತ್ತೇವೆ. ವೈದ್ಯರು ಮೂರ್ನಾಲ್ಕು ದಿನ ವಿಶ್ರಾಂತಿ ಪಡೆಯಲು ಹೇಳಿದ್ದಾರೆ. ನಾನಿ ಸಾಧ್ವಾದಷ್ಟು ಎನ್ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ‌ ಮಾಡುತ್ತೇನೆ. ವಿಶ್ರಾಂತಿಯ ಬಳಿಕ ಪ್ರಚಾರ ಕಾರ್ಯದಲ್ಲೂ ತೊಡಗಿಕೊಳ್ಳುತ್ತೇನೆ. ಜನರ ಆಶೀರ್ವಾದದಿಂದ ಇಂದು ಚೇತರಿಸಿಕೊಂಡು ಬಂದಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಚೆನ್ನೈನಿಂದ ಬಂದ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

error: Content is protected !!