Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅನೈತಿಕ ಸಂಬಂಧ ಶಂಕೆ : ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 30 : ಅನೈತಕ ಸಂಬಂಧ ಹಿನ್ನೆಲೆ ಪತ್ನಿಯ ಮೇಲೆ ಮಚ್ಚಿನಿಂದ ಪಾಪಿ ಪತಿಯೊಬ್ಬ ಮನ ಬಂದಂತೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಮಚ್ಚಿನೇಟಗಿ ಪತ್ನಿ ಮುಖಕ್ಕೆ ತೀವ್ರ ರೀತಿಯ ಗಾಯಗಳಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.

ಹಿರಿಯೂರು ತಾಲೂಕಿನ ಚೆನ್ನಮ್ಮನಹಳ್ಳಿ ತಾಂಡದಲ್ಲಿ ಈ ಘಟನೆ ಜರುಗಿದೆ. ಈ ಘಟನೆಯಲ್ಲಿ ಲಕ್ಷ್ಮಿ (35 )ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾಳೆ .ಆಕೆ ಪತಿ ತಿಪ್ಪೇಸ್ವಾಮಿ ಎಂಬಾತನಿಂದ ಕೃತ್ಯ ನಡೆದಿದೆ. ಕಳೆದ ಮೂರು ತಿಂಗಳಿಂದ ಈತನ ಜೊತೆ ಜಗಳ ಮಾಡಿಕೊಂಡು ತವರು ಮನೆಗೆ ಬಂದು ನೆಲೆಸಿದ್ದಳು ಎನ್ನುವ ಮಾಹಿತಿ ತಿಳಿದು ಬಂದಿದೆ .ಪತ್ನಿ ಲಕ್ಷ್ಮಿ ಮೇಲೆ ಅನೈತಿಕ ಸಂಬಂಧ ಇದೆ ಎಂದು ಅನುಮಾನಪಟ್ಟಿದ್ದ. ಇದೇ ದ್ವೇಷಕ್ಕೆ ಅತ್ತೆ ಮನೆಗೆ ಬಂದು ಪತಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು ದಾವಣಗೆರೆ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದೆ. ಆರೋಪಿ ತಿಪ್ಪೇಸ್ವಾಮಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...