Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಮಮಂದಿರ ಉದ್ಘಾಟನೆಗೆ ತೆರಳಿದ ಚಿತ್ರದುರ್ಗ – ದಾವಣಗೆರೆ ಜಿಲ್ಲೆಯ ಮಠಾಧೀಶರು

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ.20 : ಬಹು ವರ್ಷಗಳ ಹೋರಾಟದ ಫಲ, ಸೋಮವಾರ ನನಸಾಗುತ್ತಿದೆ. ಇದು ಇಡೀ ವಿಶ್ವದ ಭಾರತೀಯರ ಕನಸು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ, ರಾಮಲಲ್ಲಾ ಮೂರ್ತಿ ಈಗಾಗಲೇ ಗರ್ಭಗುಡಿ ತಲುಪಿದೆ. ಇನ್ನೇನಿದ್ದರು ಪ್ರಾಣ ಪ್ರತಿಷ್ಠಾಪನೆ ಮಾಡಿ, ದೇಶಕ್ಕೆ ದರ್ಶನ ನೀಡಬೇಕು ಅಷ್ಟೇ. ಆ ಕ್ಷಣಕ್ಕಾಗಿ ಎಲ್ಲರೂ ಭಕ್ತಿ ಭಾವದಿಂದ ಕಾಯುತ್ತಿದ್ದಾರೆ.

ಖುಷಿಯ ವಿಚಾರವೆಂದರೆ ಅಯೋಧ್ಯೆಗೆ ತಲುಪಿರುವುದರಲ್ಲಿ ಹೆಚ್ಚಿನದ್ದು ಕರ್ನಾಕಟದ ಪಾಲಾಗಿದೆ. ಮುಖ್ಯವಾಗಿ ಪೂಜೆಗೆ ಆಯ್ಕೆಯಾದ ರಾಮಲಲ್ಲಾ ವಿಗ್ರಹ ಕರ್ನಾಟಕದ್ದೆ. ಹೀಗಾಗಿ ಕರ್ನಾಟಕದಿಂದ ಹೆಚ್ಚೆಚ್ಚು ಮಠಾಧೀಶರು, ಭಕ್ತರು ಅಯೋಧ್ಯೆಗೆ ಭೇಟಿ ನೀಡಿ, ಪೂಜೆಯಲ್ಲಿ ಭಾಗವಹಿಸುತ್ತಿದ್ದಾರೆ. ಅದರಂತೆ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಮಠಾಧೀಶರು ಕೂಡ ಭಾಗಿಯಾಗಲಿದ್ದಾರೆ.

ಚಿತ್ರದುರ್ಗ ಜಿಲ್ಲೆಯಿಂದ

1) ಜಗದ್ಗುರು ಶ್ರೀ ನಿರಂಜನಾನಂದ ಮಹಾಸ್ವಾಮಿಜಿ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠ ಕಾಗಿನೆಲೆ,                     2) ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗ, 3) ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮೀಜಿ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಕುಂಚಗಿರಿ ಹೊಸದುರ್ಗ,                                                                 4) ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮಯ್ಯ ಮಹಾಸ್ವಾಮೀಜಿ ಸಿದ್ದರಾಮೇಶ್ವರ ಮಹಾ ಸಂಸ್ಥಾನ ಭೋವಿ ಗುರುಪೀಠ ಚಿತ್ರದುರ್ಗ ಇವರು ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ಇವರ ಜೊತೆಗೆ ದಾವಣಗೆರೆ ಜಿಲ್ಲೆಯ ಮಠಾಧೀಶರು ಕೂಡ ಅಯೋಧ್ಯೆಗೆ ತೆರಳಿದ್ದಾರೆ. 1). ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಜಿ ಶ್ರೀ ವಾಲ್ಮೀಕಿ ಗುರುಪೀಠ ರಾಜನಳ್ಳಿ ಹರಿಹರ, 2) ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಮಹಾಸ್ವಾಮೀಜಿ ಪಂಚಮಸಾಲಿ ಗುರುಪೀಠ ಹರಿಹರ, 3)ಜಗದ್ಗುರು ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮೀಜಿ ಭಗೀರಥ ಪೀಠ ಮಧುರೆ ಇವರು ಸಹ ತೆರಳಿದ್ದಾರೆ. ಚಿತ್ರದುರ್ಗ ಜಿಲ್ಲೆಯಿಂದ ಅಯೋಧ್ಯೆಗೆ ತೆರಳಿದ ಮಠಾಧೀಶರಿಗೆ ಭಕ್ತರು ಗೌರವಿಸಿ, ಬೀಳ್ಕೊಟ್ಟರು.

ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳಿ ಅಲ್ಲಿಂದ ವಿಮಾನ ಮೂಲಕ ಲಕ್ನೋ ತಲಪಲಿದ್ದಾರೆ. ಲಕ್ನೋದಿಂದ ಅಯೋಧ್ಯೆಗೆ ಕಾರಿನಲ್ಲಿ ಪ್ರಯಾಣಿಸಲಿದ್ದಾರೆ. ಅಯೋಧ್ಯೆಯಲ್ಲಿ ಸುಮಾರು ನಾಲ್ಕು ಸಾವಿರ ಗಣ್ಯರು ಸೇರಲಿದ್ದು ವಾಸ್ತವಿಕ ಸೂಚಿತವಾದ ಸಿಟಿ ನಿರ್ಮಾಣ ಮಾಡಲಾಗಿದೆ. ಎಲ್ಲಾ ಗಣ್ಯರು ವಾಸ್ತವ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು ಅದರಂತೆ ಚಿತ್ರದುರ್ಗದ ಪ್ರಮುಖ ಮಠಾಧೀಶರು ಕೂಡ ವಿಮಾನ ಮೂಲಕ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...