Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಉಪಾಧ್ಯಕ್ಷರಾಗಿ ಸೈಯದ್ ಅಫಾಖ್ ಅಹಮದ್‍ ನೇಮಕ

---Advertisement---

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.20 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರು ಹಾಗೂ ಪದವೀಧರ ವಿಭಾಗದ ರಾಜ್ಯಾಧ್ಯಕ್ಷ ಡಾ.ಆರ್.ಎಂ.ಕುಬೇರಪ್ಪನವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್‍ರವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಪಕ್ಷದ ಕಚೇರಿಯಲ್ಲಿ ಶನಿವಾರ ನೇಮಕಾತಿ ಪತ್ರ ನೀಡಿದರು.

ಸೈಯದ್ ಅಫಾಖ್ ಅಹಮದ್‍ಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಪಕ್ಷದಲ್ಲಿ ಯಾವುದೇ ಹುದ್ದೆ ಪಡೆದುಕೊಂಡು ಸುಮ್ಮನೆ ಕುಳಿತುಕೊಂಡರೆ ಪ್ರಯೋಜನವಿಲ್ಲ. ಜಿಲ್ಲೆಯಾದ್ಯಂತ ಸಂಚರಿಸಿ ಪದವೀಧರ ವಿಭಾಗವನ್ನು ಸಂಘಟಿಸಬೇಕು. ಶಿಕ್ಷಕರ ಕ್ಷೇತ್ರದ ಚುನಾವಣೆ ಎದುರಾಗಲಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರುಗಳನ್ನು ನೊಂದಾಯಿಸುವ ಕೆಲಸವಾಗಬೇಕೆಂದು ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಜಿಲ್ಲಾಧ್ಯಕ್ಷ ಮುದಸಿರ್‍ನವಾಜ್, ಸಿದ್ದಲಿಂಗರಾಜು, ಅಕ್ಬರ್, ವಿಜಯಕುಮಾರ್ ಈ ಸಂದರ್ಭದಲ್ಲಿದ್ದರು.

Join WhatsApp

Join Now

Join Telegram

Join Now

Leave a Comment