Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟಿ.ನುಲೇನೂರು ಶಂಕರಪ್ಪನವರದು ಅಪರೂಪದ ವ್ಯಕ್ತಿತ್ವ : ಬಡಗಲಪುರ ನಾಗೇಂದ್ರ

---Advertisement---

 

ಚಿತ್ರದುರ್ಗ, ನವೆಂಬರ್. 21 : ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಮಧ್ಯಕರ್ನಾಟಕ ರಾಜ್ಯ ಹಾಗೂ ಕೇಂದ್ರ ಸರ್ಕಾರ ಉಪೇಕ್ಷೆ ಮಾಡಿರುವುದ ರೈತ ಸಂಘ ಗಂಭೀರವಾಗಿ ಪರಿಣಿಸಿದೆ. ಭದ್ರಾ ಮೇಲ್ದಂಡೆ ಕಾಮಗಾರಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ  ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದೆಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

 

ಇಲ್ಲಿನ ಪತ್ರಕರ್ತರ ಸಾಂಸ್ಕೃತಿಕ ಭವನದಲ್ಲಿ ಗುರುವಾರ ಆಯೋಜಿಸಿದ್ದ ನುಲೇನೂರು ಶಂಕ್ರಣ್ಣ ನೆನಪು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾವೇರಿ ನೀರಿಗಾಗಿ ಈ ಭಾಗದ ಜನ ಮಂಡ್ಯ, ಮೈಸೂರು ರೈತರ ಕೂಗಿಗೆ ದನಿಯಾಗಿದ್ದಾರೆ. ಆದರೆ ಆ ಭಾಗದಿಂದ ಮಧ್ಯಕರ್ನಾಟಕದ ನೀರಾವರಿಗಳಿಗೆ ಬೆಂಬಲ ಲಭ್ಯವಾಗುತ್ತಿಲ್ಲ. ಹಾಗಾಗಿ  ರೈತ ಸಂಘದಿಂದ ಭದ್ರಾ ಮೇಲ್ದಂಡೆ ಬೆಂಬಲಿಸಿ ಹೋರಾಟ ನಡೆಸಲಾಗುವುದೆಂದರು.

 

ರೈತರ ಸ್ವಾಧೀನದಲ್ಲಿರುವ ಭೂಮಿಯನ್ನು ವಕ್ಫ್ ಹೆಸರಿನಲ್ಲಿ  ಕಸಿಯಲು ಅವಕಾಶ ಕೊಡುವುದಿಲ್ಲ.  ರೈತರನ್ನು ಒಕ್ಕಲೆಬ್ಬಿಸುವ ಸಂದರ್ಭ ಸೃಷ್ಟಿಯಾಗದಂತೆ ಎಚ್ಚರವಹಿಸಲಾಗುವದು. ಮುಂಬವರು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕನಿಷ್ಟ ಒಂದು ಜಿಪಂ ಹಾಗೂ  ಒಂದು ತಾಪಂ ಕ್ಷೇತ್ರ ಗೆಲ್ಲವು ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಇದಕ್ಕಾಗಿ ಪ್ರತಿ ಹಳ್ಳಿಯಲ್ಲಿಯೂ ಕಾರ್ಯಕರ್ತರ ತಂಡ ರಚಿಸಲಾಗುವುದೆಂದರು.

 

ಟಿ.ನುಲೇನೂರು ಶಂಕರಪ್ಪನವರದು ಅಪರೂಪದ ವ್ಯಕ್ತಿತ್ವ. ಎಲ್ಲಿಯೇ ರೈತರ ಮೇಲೆ ದೌರ್ಜನ್ಯ, ದಬ್ಬಾಳಿಕೆಯಾಗಲಿ ಅಲ್ಲಿ ಹೋರಾಟಕ್ಕೆ ಮುಂದಿರುತ್ತಿದ್ದರು. ಹಸಿರು ಟವಲ್‍ಗೆ ಧಕ್ಕೆಯಾಗದಂತೆ ವ್ಯಕ್ತಿತ್ವ ರೂಪಿಸಿಕೊಂಡಿದ್ದರು.ಈಗ ಹೆಗಲ ಮೇಲೆ ಹಸಿರು ಟವಲ್ ಹಾಕಿಕೊಂಡು ಅನೇಕರು ಮರಳು ದಂಧೆ ಸೇರಿದಂತೆ ಅನೇಕ ಅಕ್ರಮಗಳಲ್ಲಿ ತೊಡಗಿರುವುದು ನಮ್ಮ ಗಮನಕ್ಕೆ ಬಂದಿದೆ. ಜಾತಿ ಧರ್ಮ ಎತ್ತಿಕಟ್ಟಿ ಸಮಾಜ ಹೊಡೆಯುವ ಇಂದಿನ ಪರಿಸ್ಥಿತಿಯಲ್ಲಿ ರೈತರ ಮೇಲೆ ಮಹತ್ತರ ಜವಾಬ್ದಾರಿಯಿದೆ ಎಂದು ಹೇಳಿದರು.

ಶಂಕರಪ್ಪನವರಂತ ನೂರಾರು ರೈತರನ್ನು ಹುಟ್ಟುಹಾಕಿ ಚಳುವಳಿಗೆ ಶಕ್ತಿ ತುಂಬಬೇಕಿದೆ. ಹಸಿರು, ನೀಲಿ, ಕೆಂಪು ಟವಲ್ ಜೊತೆಗೂಡಿ ಕೆಲಸ ಮಾಡುತ್ತಿದೆ. ರೈತ ಚಳುವಳಿಗೆ ಭೌತಿಕ ಶಕ್ತಿ ತುಂಬಬೇಕಿದೆ. ಚಳುವಳಿಯ ಮೇಲೂ ಧಾರ್ಮಿಕ ಭಾವನೆ ಬೀರುತ್ತಿರುವುದು ನೋವಿನ ಸಂಗತಿ.
ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿ ಎಲ್ಲರೊಡನೆಯೂ ಉತ್ತಮ ಒಡನಾಟವಿಟ್ಟುಕೊಂಡಿದ್ದ ಟಿ.ನುಲೇನೂರು ಶಂಕರಪ್ಪ ರೈತ ಪರ ಚಳುವಳಿ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು. ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗಕ್ಕೆ ಭದ್ರಾಮೇಲ್ದಂಡೆ ಯೋಜನೆಗಾಗಿ ನಡೆದ ಎಲ್ಲಾ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿರುತ್ತಿದ್ದ ಶಂಕರಪ್ಪನವರಿಗೆ ಜಿಲ್ಲೆಗೆ ನೀರು ಹರಿಸಬೇಕೆಂಬ ಆಸೆಯಿತ್ತು. ಆದರೆ ವಿಧಿ ಇಷ್ಟು ಬೇಗೆ ಸೆಳೆದುಕೊಳ್ಳುತ್ತದೆಂದು ನಾವುಗಳ್ಯಾರು ಊಹಿಸಿರಲಿಲ್ಲ ಎಂದರು.

 

ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿ ಭದ್ರಾ ಮೇಲ್ದಂಡೆ ಹೋರಾಟದಲ್ಲಿ ನುಲೇನೂರು ಶಂಕ್ರಪ್ಪ ಅವರದು  ಅವಿರತ ಪ್ರಯತ್ನ.ಸಮಿತಿ ಅಧ್ಯಕ್ಷರಾಗಿ ಹೋರಾಟ ಮುನ್ನಡೆಸುವಾಗಲೇ ನಮ್ಮನ್ನು ಅಗಲಿ್ದ್ದು ನೋವಿನ ಸಂಗತಿ. ಜಿಲ್ಲೆಯಲ್ಲಿ ಕೋಟಿಗಟ್ಟಲೆ ಅಡಿಕೆ ಬೆಳೆಯುವ ರೈತರಿದ್ದಾರೆ. ಕೊಳವೆ ಬಾವಿಗಳಲ್ಲಿ ನೀರು ಹೋಗಿ ತೊಂದರೆ ಅನುಭವಿಸಿದ್ದಾರೆ. ಆದರೆ ಭದ್ರಾ ಮೇಲ್ದಂಡೆ ಹೋರಾಟದ ಜೊತೆ ಹೆಜ್ಚೆ ಹಾಕಲು ಅವರೆಲ್ಲ ಹಿಂದೇಟು ಹಾಕುತ್ತಿರುವುದು ತರವಲ್ಲದ ನಡವಳಿಕೆ ಎಂದರು.

 

ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರುಗಳಾದ ಶಿವಾನಂದಕುಗ್ವೆ, ಗೋವಿಂದರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್, ಸಿಪಿಐ ಮುಖಂಡ ಜಿ.ಸಿ.ಸುರೇಶ್‍ಬಾಬು, ಕಮಲಮ್ಮ ನುಲೇನೂರು ಎಂ.ಶಂಕರಪ್ಪ, ರಾಜ್ಯ ಮಹಿಳಾ ಉಪಾಧ್ಯಕ್ಷೆ
ಮಂಜುಳ ಹಕ್ಕಿ, ಬಸ್ತಿಹಳ್ಳಿ ಸುರೇಶ್‍ಬಾಬು,ಹಂಪಯ್ಯನಮಾಳಿಗೆ ಧನಂಜಯ, ಚಿಕ್ಕಪ್ಪನಹಳ್ಳಿ ಷಣ್ಮುಖ, ಎಂ.ಎನ್. ಅಹೋಬಲಪತಿ, ಕೆ.ಆರ್.ದಯಾನಂದ್, ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಸುಜಾತ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕೆ.ಸಿ.ಹೊರಕೇರಪ್ಪ, ದಸ್ತಗಿರಿಸಾಬ್, ರೈತ ಮಹಿಳೆ ಸುಧಾ ಡಿ.ಎಸ್.ಹಳ್ಳಿ, ನಿವೃತ್ತ ಡಿವೈಎಸ್ಪಿ ಗಳಾದ ಮಹಂತರೆಡ್ಡಿ, ಅಬ್ದುಲ್‍ರೆಹಮಾನ್, ಸೈಯದ್ ಇಸಾಕ್, ಜಿ.ಬಿ.ಶೇಖರ್,ಹಿರೇಕಬ್ಬಿಗೆರೆ ನಾಗರಾಜ್, ಮುದ್ದಾಪುರ ನಾಗರಾಜ್, ಮಲ್ಲಾಪುರ ತಿಪ್ಪೇಸ್ವಾಮಿ,  ಹುಣಿಸೆಕಟ್ಟೆ ಕಾಂತರಾಜ್  ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment