Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

T20 3 ನೇ ಪಂದ್ಯ : ಸೋಲಿನ ಸುಳಿಯಲ್ಲಿದ್ದ ತಂಡವನ್ನು ಗೆಲುವಿನ ದಡ ಸೇರಿಸಿದ ಮ್ಯಾಕ್ಸ್‌ವೆಲ್ : ರೋಚಕ ಪಂದ್ಯದಲ್ಲಿ  ಆಸ್ಟ್ರೇಲಿಯಾಗೆ ಗೆಲುವು

---Advertisement---

ಸುದ್ದಿಒನ್ : ಭಾರತದಲ್ಲಿ ನಡೆಯುತ್ತಿರುವ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ಮೊದಲ ಜಯ ದಾಖಲಿಸಿದೆ. ಬೃಹತ್ ಸ್ಕೋರ್ ದಾಖಲಾದ ಈ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಆಸೀಸ್ ಗೆಲುವು ಸಾಧಿಸಿತು. 

ಭಾರತ ನೀಡಿದ 223 ರನ್‌ಗಳ ಗುರಿಯನ್ನು ಆಸ್ಟ್ರೇಲಿಯಾ ನಿಖರವಾಗಿ 20 ಓವರ್‌ಗಳಲ್ಲಿ ಮುಟ್ಟಿತು. ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ 48 ಎಸೆತಗಳಲ್ಲಿ 104 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.  ಈ ಪಂದ್ಯದ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಮೊದಲ ಜಯ ದಾಖಲಿಸಿದೆ. ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಭಾರತ 2-1 ಮುನ್ನಡೆಯಲ್ಲಿ ಮುಂದುವರಿದಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಭಾರತ ನಿಗಧಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತು. ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅಜೇಯ ಶತಕ ಸಿಡಿಸಿದರು. ಅವರು 57 ಎಸೆತಗಳಲ್ಲಿ ಒಟ್ಟು 123 ರನ್ ಗಳಿಸಿದರು. ರುತುರಾಜ್ ಗಾಯಕ್ವಾಡ್ ಅವರೊಂದಿಗೆ ಸೂರ್ಯಕುಮಾರ್ ಯಾದವ್ 29 ಎಸೆತಗಳಲ್ಲಿ 39 ಮತ್ತು ತಿಲಕ್ ವರ್ಮಾ 24 ಎಸೆತಗಳಲ್ಲಿ 31 ರನ್ ಗಳಿಸಿದರು. ಭಾರತ ನಿಗಧಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್‌ಗಳ ಬೃಹತ್ ಸ್ಕೋರ್ ಮಾಡಿತು.

ಬಳಿಕ ಬೃಹತ್ ಗುರಿಯೊಂದಿಗೆ ಕಣಕ್ಕೆ ಇಳಿದ ಆಸ್ಟ್ರೇಲಿಯಾ ಆರಂಭದಿಂದಲೇ ಪ್ರತಿದಾಳಿ ನಡೆಸಿತು. ಟ್ರಾವಿಸ್ ಹೆಡ್ 18 ಎಸೆತಗಳಲ್ಲಿ 35 ರನ್ ಗಳಿಸಿ ಆಕ್ರಮಣಕಾರಿ ಆಟವಾಡಿದರು.  ಆ ಬಳಿಕ ಆಸೀಸ್ ಅಲ್ಪಾವಧಿಯಲ್ಲಿ ಹಾರ್ಡಿ (16) ಹಾಗೂ ಜೋಶ್ ಇಂಗ್ಲಿಸ್ (10) ವಿಕೆಟ್ ಕಳೆದುಕೊಂಡು 68 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ವಿಧ್ವಂಸಕ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್ ವೆಲ್ ಉತ್ತಮ ಪ್ರದರ್ಶನ ನೀಡಿದರು. ವಿಕೆಟ್‌ಗಳ ಪತನವಾದರೂ ರನ್ ಗಳಿಕೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಂಡರು. ಅವರಿಗೆ ಮ್ಯಾಥ್ಯೂ ವೇಡ್ (16 ಎಸೆತಗಳಲ್ಲಿ 28) ನೆರವಾದರು.

ಕೊನೆಯ ಎರಡು ಓವರ್‌ಗಳಲ್ಲಿ ಆಸ್ಟ್ರೇಲಿಯಾ ಗೆಲುವಿಗೆ 43 ರನ್‌ಗಳ ಅಗತ್ಯವಿದ್ದಾಗ ಭಾರತ ಸುಲಭವಾಗಿ ಗೆಲ್ಲುತ್ತದೆ ಎಂದು ಎಲ್ಲರೂ ಭಾವಿಸಿದ್ದರು.  ಆದರೆ 19ನೇ ಓವರ್ ನಲ್ಲಿ ಅಕ್ಷರ್ ಪಟೇಲ್ 22 ರನ್ ನೀಡಿದರು. ಕೊನೆಗೆ 6 ಎಸೆತಗಳಲ್ಲಿ  21 ಬೇಕಾಯಿತು. 20 ನೇ ಓವರ್ ನಲ್ಲಿ ವೇಡ್ ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿದರು ಮತ್ತು ಎರಡನೇ ಎಸೆತದಲ್ಲಿ ಸಿಂಗಲ್ ಪಡೆದರು. ನಂತರ ಮ್ಯಾಕ್ಸ್ ವೆಲ್ 6, 4, 4, 4 ಬಾರಿಸಿ ತಂಡಕ್ಕೆ ಜಯ ತಂದುಕೊಟ್ಟರು.
ಅವರು 48 ಎಸೆತಗಳಲ್ಲಿ 104 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ಪಂದ್ಯದ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತನ್ನ ಸರಣಿ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಸದ್ಯ ಭಾರತ 3 ಪಂದ್ಯಗಳಲ್ಲಿ 2-1 ಮುನ್ನಡೆಯಲ್ಲಿದೆ.  ನಾಲ್ಕನೇ ಟಿ20 ಪಂದ್ಯ ಶುಕ್ರವಾರ ನಡೆಯಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...