Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಗರು ಪಲ್ಯ ಸಿನಿಮಾದ ಟಗರು ಉಳಿವಿಗಾಗಿ ಸೋಷಿಯಲ್ ಮೀಡಿಯಾ ಅಭಿಯಾನ

Facebook
Twitter
Telegram
WhatsApp

ಬಾಗಲಕೋಟೆ : ಒಂದು ಟಗರಿನ ಉಳಿವಿಗಾಗಿ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಟಗರು ಅಂತಿದ್ದದ್ದಲ್ಲ. ಸಿನಿಮಾದಲ್ಲೆಲ್ಲಾ ಚಾಪು ಮೂಡಿಸಿದೆ, ಹಲವು ಪ್ರಶಸ್ತಿಗಳನ್ನೆಲ್ಲಾ ತನ್ನದಾಗಿಸಿಕೊಂಡಿದೆ. ಅದುವೆ ಟಗರು ಪಲ್ಯ ಸಿನಿಮಾದ 7 ಸ್ಟಾರ್ ಸುಲ್ತಾನ್.

ಸುಲ್ತಾನ್ ನನ್ನು ಸದ್ಯಕ್ಕೆ ಬಾಗಲಕೋಟೆ ಜಿಲ್ಲೆಯ ಸುತಗುಂಡಾರದಲ್ಲಿ ಯೂನಿಸ್ ಎಂಬುವವರು ನೋಡಿಕೊಳ್ಳುತ್ತಿದ್ದಾರೆ. ಈ ಬಾರಿಯ ಬಕ್ರೀದ್ ಹಬ್ಬಕ್ಕೆ ಸುಲ್ತಾನ್ ನನ್ನು ಬಲಿ ಕೊಡಲು ಯೂನಿಸ್ ನಿರ್ಧಾರ ಮಾಡಿದ್ದಾರೆ. ಇದನ್ನು ಕೇಳಿ, ಅಭಿಮಾನಿಗಳು ಶಾಕ್ ಆಗಿದ್ದಾರೆ. ಸೋಷಿಯಲ್ ಮೀಡಯಾದಲ್ಲಿ ಯೂನಿಸ್ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

ಸುಲ್ತಾನ್​​ ಇದುವರೆಗೂ ಸಾಕಷ್ಟು ಕಾಳಗಳಲ್ಲಿ ಜಯಭೇರಿ ಬಾರಿಸಿ ಲಕ್ಷ, ಲಕ್ಷ ಬಹುಮಾನ, ಬೈಕ್, ಚಿನ್ನ ಸೇರಿದಂತೆ ಹಲವು ಉಡುಗೊರೆ ತನ್ನದಾಗಿಸಿಕೊಂಡಿದೆ.  ಸತತ 34ಕ್ಕೂ ಹೆಚ್ಚು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. 20 ಲಕ್ಷಕ್ಕೂ ಅಧಿಕ ಹಣ, 1 ಬುಲೆಟ್ ಬೈಕ್, 1 ಎಚ್​​ಎಫ್​​ ಡಿಲಕ್ಸ್, ಎಚ್​​ಎಫ್ ಹಂಡ್ರೆಡ್, ಒಂದೂವರೆ ತೊಲೆ (15 ಗ್ರಾಂ) ಬಂಗಾರ ಗೆದ್ದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!