Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿರಾ  ಕ್ಯಾಂಟಿನ್ ಗೆ ಭೇಟಿ ನೀಡಿ ಪರಿಶೀಲಿಸಿದ ತಹಶೀಲ್ದಾರ್ ಎನ್.ರಘುಮೂರ್ತಿ

Facebook
Twitter
Telegram
WhatsApp

ಚಳ್ಳಕೆರೆ, (ಮೇ.27): ನಗರದ ಬಿಇಓ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ  ಗುರುವಾರ ಗ್ಯಾಸ್ ಸೋರಿಕೆಯಾಗಿ ಅವಘಡ ಸಂಭವಿಸಿದ್ದು

ಮೂವರು ಅಡುಗೆ ಸಿಬ್ಬಂದಿಗೆ ಗಾಯಗಳಾಗಿ ಪ್ರಾಣಪಾಯದಿಂದ ಪಾರಾಗಿದ್ದರು.

ಅಡುಗೆ ತಯಾರಿಸುವಾಗ ಗ್ಯಾಸ್ ಪೈಪ್ ನಲ್ಲಿ ಸೋರಿಕೆಯಾಗಿ ಮೂವರ ಬಟ್ಟೆಗಳಿಗೆ ಬೆಂಕಿ ಹತ್ತಿಕೊಂಡಿದ್ದು, ಅಲ್ಲಿದ್ದವರು ಬೆಂಕಿ ನಂದಿಸಿ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಈ ಘಟನೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎನ್.ರಘುಮೂರ್ತಿ ಇಂದಿರಾ ಕ್ಯಾಂಟಿನ್ ಗೆ ಭೇಟಿ ನೀಡಿ ಪರಶೀಲಸಿದರು. ನಂತರ ಗಾಯಳುಗಳನ್ನು ಮಾತನಾಡಿಸಿ ಅರೋಗ್ಯ ವಿಚಾರಿಸಿ ಮಾತನಾಡಿದರು.  ಬಡವರಿಗೆ,ಕಾರ್ಮಿಕರಿಗೆ,ಶಾಲೆ ಮಕ್ಕಳಿಗೆ ಅನುಕೂಲವಾಗಲೆಂದು ಇಂದಿರಾ  ಮಾಡಿಲಾಗಿದ್ದು  ಈ ಕ್ಯಾಂಟಿನ್ ನಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು,ತಿಂಡಿ ಹಾಗೂ ಊಟ  ಸ್ವಚ್ಚವಾಗಿ  ರುಚಿಯಾಗಿ ಮಾಡಿಬೇಕು .
ಅಡಿಗೆ ತಯಾರು ಮಾಡುವಾಗ ಎಚ್ಚರ ವಹಿಸಬೇಕು.ಗ್ಯಾಸ್ ನಿಂದ ಅಡುಗೆ ತಯಾರು ಮಾಡುತ್ತಿರುವವರು ಗ್ಯಾಸ್ ಬಳಕೆ ಹಾಗೂ ಅದರ ನಿರ್ವಹಣೆ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ .

ಇಲ್ಲವಾದರೆ ಕಾರ್ಮಿಕರು ತೊಂದರೆ ಅನುಭವಿಸುವಂತಾಗುತ್ತದೆ‌. ನಿನ್ನೆ ಆಗಿರುವ ಘಟನೆ ವಿಷಾದನೀಯ ಆದರೆ ಸದ್ಯ ಸಣ್ಣ ಅವಘಡದಲ್ಲೆ  ಮುಗಿದಿದೆ. ಇಂತಹ ಅವಘಡಗಳು ಪುನಃ ಸಂಭವಿಸದಂತೆ ಇಲ್ಲಿನ ವ್ಯವಸ್ಥಾಪಕರು ನೋಡಿಕೊಳ್ಳಬೇಕಾಗುತ್ತದೆ. ಎಂದು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಅಲ್ಲಿಗೆ ತಿಂಡಿ ತಿನ್ನಲು ಬಂದವರಲ್ಲಿ ರುಚಿ ಮತ್ತು ಶುಚಿಯ ಬಗ್ಗೆ ವಿಚಾರಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!