Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಚಾರಿ ಆರೋಗ್ಯ ಘಟಕದ ಸದುಪಯೋಗ ಪಡೆದುಕೊಳ್ಳಿ :  ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಆ.17) :  ಗಣಿ ಬಾಧಿತ ಪ್ರದೇಶದ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಿಲ್ಲಾ ಖನಿಜ ಘಟಕದ ವತಿಯಿಂದ ಸಂಚಾರಿ ಆರೋಗ್ಯ ಘಟಕ ನೀಡಲಾಗಿದೆ. ಸಾರ್ವಜನಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು.

ಚಿತ್ರದುರ್ಗ ನಗರದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರ ಸಂಚಾರಿ ಆರೋಗ್ಯ  ಘಟಕದ ವಾಹನಕ್ಕೆ  ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಸಂಚಾರಿ ಆರೋಗ್ಯ ಘಟಕ ಜನರಿಗೆ ಬಹಳ ಉಪಯುಕ್ತವಾಗಿದೆ. ಇದರ ಮೂಲಕ ಗ್ರಾಮಗಳಿಗೆ ತೆರಳಿ ಆರೋಗ್ಯ ಸೇವೆಯನ್ನು ಒದಗಿಸಲಾಗುತ್ತದೆ. ಇದರಿಂದ ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ ತಲುಪಿಸಲಾಗುತ್ತದೆ. ಈ ಆರೋಗ್ಯ ಘಟಕದಲ್ಲಿ ವೈದ್ಯರು, ಫಾರ್ಮಸಿಸ್ಟ್, ಪ್ರಯೋಗಶಾಲಾ ತಜ್ಞರು, ಶುಶ್ರೂಷಕರು, ವಾಹನ ಚಾಲಕ ಹಾಗೂ ಡಿ ದರ್ಜೆ ನೌಕರರು ಕರ್ತವ್ಯ ನಿರ್ವಹಿಸುತ್ತಾರೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್.ರಂಗನಾಥ್ ಮಾತನಾಡಿ, ಗಣಿ ಬಾಧಿತ ಪ್ರದೇಶಗಳಲ್ಲಿ ವೈದ್ಯಕೀಯ ಸೇವೆ ನೀಡುವುದರ ಮೂಲಕ, ಸಾರ್ವಜನಿಕರಲ್ಲಿ ಸಾಧಾರಣವಾಗಿ ಕಂಡುಬರುವ ಗಂಭೀರ ಸ್ವರೂಪದ ಕಾಯಿಲೆಗಳಿಗೆ ಸಂಚಾರಿ ಚಿಕಿತ್ಸೆ ಪ್ರಯೋಗಾಲಯಗಳ ಪರೀಕ್ಷೆ ಮಾಡಲಾಗುವುದು.

ಜೊತೆಗೆ ಬಾಣಂತಿ ಗರ್ಭಿಣಿಯರ ಆರೈಕೆ, ತಾಯಿ ಮಕ್ಕಳ ಲಸಿಕೆ ಕಾರ್ಯಕ್ರಮ, ಕುಟುಂಬ ಕಲ್ಯಾಣ ಯೋಜನಾ ಅನುಷ್ಠಾನ, ಮಾಹಿತಿ ಶಿಕ್ಷಣ ಸಂವಹನ, ಆರೋಗ್ಯ ಜಾಗತಿಯನ್ನು ಸಂಚಾರಿ ಆರೋಗ್ಯ ಘಟಕದಿಂದ ನಿರ್ವಹಿಸಲಾಗುವುದು. ತುರ್ತು ಸಂದರ್ಭದಲ್ಲಿ ಉನ್ನತ ಮಟ್ಟದ ಆಸ್ಪತ್ರೆಗಳಿಗೆ ರೋಗಿಗಳನ್ನು ನಿರ್ದೇಶನ ಮಾಡಲಾಗುವುದು ಎಂದರು.

ತಾಲೂಕು ಅರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿ, ತಾಲೂಕಿನ 46 ಹಳ್ಳಿಗಳಿಗೆ ಕ್ರೀಯಾ ಯೋಜನೆ ಅನುಸಾರ ನಿಗದಿತ ದಿನಾಂಕಗಳಂದು ಸಂಚಾರಿ ಆರೋಗ್ಯ ಘಟಕ ಭೇಟಿ ಆರೋಗ್ಯ ಸೇವೆ ಒದಗಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಬಿ.ಮುಗಪ್ಪ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜೆ.ಆರ್.ಗೌರಮ್ಮ, ಹೆಚ್.ಬಿ.ಪೂಜಾರ್,   ಕೆ.ಎ.ಮಾರುತಿ ಪ್ರಸಾದ್,  ಗಂಗಾಧರೆಡ್ಡಿ, ರಂಗಾರೆಡ್ಡಿ, ಶ್ರೀಧರ್, ಆಶಾ ಕಾರ್ಯಕರ್ತೆಯರು ಸೆರಿದಂತೆ ಇತರೆ ಸಿಬ್ಬಂದಿ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!