Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರಿಗೆ ವಿಚಾರಕ್ಕೆ ಗೆಟ್ ಲಾಸ್ಟ್ ಎಂದ ಕಾರಜೋಳ.. ನೀನ್ಯಾರು ಹೇಳೋಕೆ ಎಂದ ರಂಗನಾಥ್ : ಸದನದಲ್ಲಿ ಕೋಲಾಹಲ..!

Facebook
Twitter
Telegram
WhatsApp

ಬೆಳಗಾವಿ: ಕೊರೊನಾ ಸಮಸ್ಯೆಯ ಬಳಿಕ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಗಳ ಕೊರತೆ ಉಂಟಾಗಿದೆ. ಈ ವಿಚಾರವನ್ನು ಇಂದು ಸದನದಲ್ಲೂ ಪ್ರಸ್ತಾಪ ಮಾಡಲಾಗಿದೆ. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಸಿದ್ದು ಸವದಿ ವಿಚಾರ ಎತ್ತಿದ್ದು, ನಮ್ಮ ಕ್ಷೇತ್ರದಲ್ಲಿ ಕಾಲೇಜು ಮಕ್ಕಳಿಗೆ ಬಸ್ ಗಳ ವ್ಯವಸ್ಥೆ ಸರಿಯಾಗಿಲ್ಲ. ಮಕ್ಕಳು ಶಾಲೆಗೆ ಹೋಗುವುದಕ್ಕೆ ಬಸ್ ಗಳನ್ನು ಕೊಡಿ. ದೊಡ್ಡ ಬಸ್ ಕೊಡದೆ ಇದ್ದರು ಪರವಾಗಿಲ್ಲ, ಮಿನಿ ಬಸ್ ಆದರೂ ನೀಡಿ ಎಂದಿದ್ದರು. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ಶ್ರೀರಾಮುಲು, ಸಮಸ್ಯೆ ಯಾವ ಭಾಗದಲ್ಲಿ ಇದೆ ಹೇಳಿ ಬಗೆಹರಿಸೋಣಾ ಎಂದರು.

ಸಿದ್ದು ಸವದಿ ಕೂಡ ಈ ಮಾತಿಗೆ ತೃಪ್ತರಾಗಲಿಲ್ಲ. ಜೊತೆಗೆ ಮಾಜಿ ಸಚಿವ ಆರ್ ವಿ ದೇಶಪಾಂಡೆ ಕೂಡ ಬೆಂಬಲ ಸೂಚಿಸಿದರು. ಕನಿಷ್ಠ ಮೂಲ ಸೌಕರ್ಯದ ಅಡಿಯಲ್ಲಿ ಬಸ್ ಸೌಲಭ್ಯ ಕೊಡದೆ ಇದ್ರೆ ಹೇಗೆ ರಾಮುಲು ಅವರೇ..? ಸದನಕ್ಕೆ ತಪ್ಪು ಮಾಹಿತಿ ನೀಡವೇಡಿ ಎಂದರು. ಬಳಿಕ ಕಾಂಗ್ರೆಸ್ ನಾಯಕರು ಸದನದ ಬಾವಿಗಿಳಿದು ಹೋರಾಟ ಮಾಡಿದರು. ಇದೇ ವೇಳೆ ಶಾಸಕ ಕುಣಿಗಲ್ ರಂಗನಾಥ್ ಹಾಗೂ ಗೋವಿಂದ ಕಾರಜೋಳ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ರಂಗನಾಥ್ ಅವರಿಗೆ ಗೆಟ್ ಲಾಸ್ಟ್ ಎಂದು ಬೈದರು. ಬಳಿಕ ರಂಗನಾಥ್, ಅದನ್ನು ಹೇಳುವುದಕ್ಕೆ ನೀನ್ಯಾರು..? ನನ್ನ ಹಕ್ಕನ್ನು ಕಿತ್ತುಕೊಳ್ಳುವುದಕ್ಕೆ ನೀನ್ಯಾರು ಎಂದು ಹರಿಹಾಯ್ದ ಘಟನೆ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!