ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿಕ್ಕಬಳ್ಳಾಪುರ: ಅಂತರ ರಾಜ್ಯ ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಅವರು ಇದೀಗ ಮತ್ತೊಂದು ಸ್ಪೋಟಕ ಆರೋಪ ಮಾಡಿದ್ದಾರೆ. ಅದು ಮಾಜಿ ಸಚಿವ ಡಾ. ಸುಧಾಕರ್ ವಿಚಾರವಾಗಿ ಈ ಆರೋಪ ಮಾಡಿದ್ದಾರೆ. ಸುಧಾಕರ್ ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಹೇಳುತ್ತಿದ್ದರು. ತಾಕತ್ ಇದ್ದರೆ ಕೇಸ್ ಹಾಕಿ ಎಂದಿದ್ದೆ.
ಮಾಜಿ ಸಚಿವ ಸುಧಾಕರ್ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದಾರೆ. ಸುಧಾಕರ್ ವಿಷಯ ಈಗ ಮಾತನಾಡಿ ಪ್ರಯೋಜನವಿಲ್ಲ. ಯಾಕಂದ್ರೆ ಅವರು ಈಗ ಸೋತು ಸುಣ್ಣವಾಗಿದ್ದಾರೆ. ಈಗ ಅವರನ್ನು ಮಾತನಾಡಿಸಿದರೆ ಸತ್ತ ಹಾವನ್ನು ಹೊಡೆದು ಎಬ್ಬಿಸಿದಂತೆ ಆಗುತ್ತದೆ.
ನನ್ನ ಮೇಲೆ ಅವರು ಈವರೆಗೂ ಯಾವ ಮೊಕದ್ದಮೆಯನ್ನು ಹಾಕಿಲ್ಲ. ನಾವೂ ವೈಯಕ್ತಿಕವಾಗಿ ಏನೇನು ಸಮಸ್ಯೆಗಳನ್ನು ಎದುರಿಸಿದ್ದೇವೆ ಅನ್ನೋದು ನಮಗೆ ಮಾತ್ರ ಗೊತ್ತು. ಇಂದು ಸುಧಾಕರ್ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಎಂದಿದ್ದಾರೆ.
ಇನ್ನು ಗುತ್ತುಗೆದಾರ ಕೆಂಪಣ್ಣ ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದರು. ಈ ವಿಚಾರವನ್ನು ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ವಿರೋಧ ಮಾಡಿತ್ತು. ದೊಡ್ಡ ಚರ್ಚೆಯೇ ಆಗಿತ್ತು. ಇದೀಗ ಸುಧಾಕರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್