ತಮಿಳು ನಟ ವಿಜಯ್ ಮಗಳು ಆತ್ಮಹತ್ಯೆ : 16 ವರ್ಷಕ್ಕೆ‌ ಯಾಕಿಂತ ನಿರ್ಧಾರ..?

Facebook
Twitter
Telegram
WhatsApp

 

 

ಚೆನ್ನೈ: ತಮಿಳಿನ ನಟ, ನಿರ್ದೇಶಕ ವಿಜಯ್ ಆಂಟೋನಿ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಳ್ವಾರಪೇಟೆಯಲ್ಲಿರುವ ತಮ್ಮ‌ನಿವಾಸದಲ್ಲಿಯೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೀರಾ ಆತ್ಮಹತ್ಯೆ ಮಾಡಿಕೊಂಡ ಯುವತಿ.

ಮೀರಾಳನ್ನು ನೇಣು ಬಿಗಿದ ಸ್ಥಿತಿಯಲ್ಲಿ ನೋಡಿದ ಕೂಡಲೇ, ಮನೆಯವರು ಆಕೆಯನ್ನು ಕರೆದುಕೊಂಡು ಆಸ್ಪತ್ರೆಗೆ ಸೇರಿಸಿದ್ದರು. ಅಷ್ಟರಲ್ಲಾಗಲೇ ಮೀರಾಳ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮೀರಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ.

ಚೆನ್ನೈನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಮೀರಾ ಸೆಕೆಂಡ್ ಪಿಯುಸಿ ವಿಧ್ಯಾಭ್ಯಾಸ ಮಾಡುತ್ತಿದ್ದಳು. ವಯಸ್ಸಿನ್ನು ಕೇವಲ 16 ವರ್ಷ. ಈ ಸಂಬಂಧ ತೇನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯ್ ಆಂಟೋನಿಗೆ ಮೀರಾ ಮತ್ತು ಲಾರಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ಚಿಕ್ಕಮಗಳು ಮೀರಾ ಆತ್ಮಹತ್ಯೆ ಮಾಡಿಕೊಂಡು, ಜೀವನವನ್ನೆ ಕೊನೆಯಾಗಿಸಿಕೊಂಡಿದ್ದಾಳೆ.

ವಿಜಯ್ ಆಂಟೋನಿ ತಮಿಳಿನ ಜನಪ್ರಿಯ ಸಂಗೀತ ಸಂಯೋಜಕ, ಹಾಡುಗಾರ, ನಟ, ನಿರ್ದೇಶಕರಾಗಿ ಗುರುತಿಸಿಕೊಂವರು. ಹಲವು ವರ್ಷಗಳಿಂದ ಇಂಡಸ್ಟ್ರಿರುವ ವಿಜಯ್ ಆಂಟೋನಿ ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಪಿಚ್ಚಕಾರನ್, ಪಿಚ್ಚಕಾರನ್ 2, ಸೈತಾನ್, ಕಾಳಿ, ಕೊಲೆಗಾರನ್, ಕುಡಿ ಒರುವನ್, ತಮಿಳ್ ಅರಸನ್ ಸೇರಿ ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರಿನಲ್ಲಿ ನಡೆದ ಜನತಾ ದರ್ಶನ ಹೇಗಿತ್ತು ? ಸಚಿವ ಸುಧಾಕರ್ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…!

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.25 : ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಬೇಕು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯೂರು

ಹಿರಿಯೂರಿನಲ್ಲಿ ಜನತಾದರ್ಶನ ಕಾರ್ಯಕ್ರಮಕ್ಕೆ ಸಚಿವ ಡಿ. ಸುಧಾಕರ್ ಚಾಲನೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

  ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್.25 :  ನಗರದ ತಾಹಾ ಪ್ಯಾಲೇಸ್‌ನಲ್ಲಿ ಸೋಮವಾರ‌ ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನೆಡಯಿತು. ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್

ಜನತಾ ದರ್ಶನದಲ್ಲಿ ವೇದಿಕೆಯಲ್ಲೇ ಕಿತ್ತಾಡಿಕೊಂಡ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ..!

  ಕೋಲಾರ: ಇಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆಯ ದಿನ. ರಾಜ್ಯಾದ್ಯಂತ ಒಂದೇ ದಿನ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ ತುಂಬಿದ

error: Content is protected !!