Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಳೆ ಇಲ್ಲದೆ ಇದ್ದರು ಕಾವೇರಿಗಾಗಿ ಪೀಡಿಸುತ್ತಿರುವ ತಮಿಳುನಾಡು : ಮಂಡ್ಯ ಸಂಸದೆ ಕರೆ ಕೊಟ್ಟಿದ್ದೇನು..?

---Advertisement---

 

ಮಂಡ್ಯ: ಮುಂಗಾರು ಮಳೆ ನಿರೀಕ್ಷಿತ ಸಮಯಕ್ಕೆ ಬಾರದೆ ರೈತರೇ ತಲೆ‌ ಮೇಲೆ ಕೈಹೊತ್ತು ಕೂತಿದ್ದಾರೆ. ಯಾವಾಗ ಮಳೆ ಬರಬಹುದು ಎಂಬ ಆಸೆಯಿಂದ ಕಾಯುತ್ತಿದ್ದಾರೆ. ಭೂಮಿಗೆ ಹಾಕಿದ ಬೀಜಗಳು ಮೊಳಕೆಯೊಡೆಯುವ ಮುನ್ನವೆ ಮಳೆರಾಯ ನಾಪತ್ತೆಯಾಗಿದ್ದಾನೆ. ಹೀಗಿರುವಾಗ ಕಾವೇರಿ ನೀರಿನ ಬಗ್ಗೆಯೂ ಯೋಚಿಸಬೇಕು ಅಲ್ಲವೆ. ವಾಡಿಕೆಯಂತೆ ಮಳೆಯಾಗಿದ್ದರೆ ಕಾವೇರಿ ನೀರನ್ನು ತಮಿಳುನಾಡಿಗೂ ಹರಿಸಬಹುದಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಯೋಚಿಸಲೇಬೇಕಾಗಿದೆ.

ರಾಜ್ಯದಲ್ಲಿ ಮಳೆಯಿಲ್ಲದೆ ಇದ್ದರು ತಮಿಳುನಾಡು ಮಾತ್ರ ಮಾಮೂಲಿಯಂತೆ ಕ್ಯಾತೆ ತೆಗೆಯುತ್ತಲೇ ಇದೆ. ಈ ಬಗ್ಗೆ ಸಂಸದೆ ಸುಮಲತಾ‌ ಮಾತನಾಡಿದ್ದು, ಕಾವೇರಿ ವಿಚಾರದಲ್ಲಿ ಪಕ್ಷ ಭೇದ ಮರೆತು ಎಲ್ಲರೂ ಒಂದಾಗಬೇಕು ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸುಮಲತಾ, ನಾಡು, ನುಡಿ, ಜಲ ವಿಚಾರದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡಬಾರದು. ರಾಜ್ಯದ ರೈತರಿಗೆ, ಜನರಿಗೆ ಸಮಸ್ಯೆಯಾದರೆ ಎಲ್ಲರು ಒಂದಾಗಬೇಕು. ಇದರಲ್ಲಿ ರಾಜಕೀಯ, ಪಕ್ಷ ಅಂತ ಇರಬಾರದು. ಕಾವೇರಿ‌ ಕಣಿವೆಯಲ್ಲಿ ನಾಲ್ಕು ವರ್ಷದಿಂದ ಉತ್ತಮ ಮಳೆಯಾಗಿತ್ತು. ಈ ವರ್ಷ ಮಳೆಯೂ ಆಗಿಲ್ಲ, ನೀರು ಇಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಕಾವೇರಿ ನೀರು ಪ್ರಾಧಿಕಾರಕ್ಕೂ ಮನವಿ ಮಾಡಬೇಕು. ಅದರ ಜೊತೆಗೆ ಕೇಂದ್ರ ಸರ್ಕಾರಕ್ಕೂ ಈ ಸಂಬಂಧ ಪತ್ರ ಬರೆದಿದ್ದೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...