Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆ ಇಲ್ಲದೆ ಇದ್ದರು ಕಾವೇರಿಗಾಗಿ ಪೀಡಿಸುತ್ತಿರುವ ತಮಿಳುನಾಡು : ಮಂಡ್ಯ ಸಂಸದೆ ಕರೆ ಕೊಟ್ಟಿದ್ದೇನು..?

Facebook
Twitter
Telegram
WhatsApp

 

ಮಂಡ್ಯ: ಮುಂಗಾರು ಮಳೆ ನಿರೀಕ್ಷಿತ ಸಮಯಕ್ಕೆ ಬಾರದೆ ರೈತರೇ ತಲೆ‌ ಮೇಲೆ ಕೈಹೊತ್ತು ಕೂತಿದ್ದಾರೆ. ಯಾವಾಗ ಮಳೆ ಬರಬಹುದು ಎಂಬ ಆಸೆಯಿಂದ ಕಾಯುತ್ತಿದ್ದಾರೆ. ಭೂಮಿಗೆ ಹಾಕಿದ ಬೀಜಗಳು ಮೊಳಕೆಯೊಡೆಯುವ ಮುನ್ನವೆ ಮಳೆರಾಯ ನಾಪತ್ತೆಯಾಗಿದ್ದಾನೆ. ಹೀಗಿರುವಾಗ ಕಾವೇರಿ ನೀರಿನ ಬಗ್ಗೆಯೂ ಯೋಚಿಸಬೇಕು ಅಲ್ಲವೆ. ವಾಡಿಕೆಯಂತೆ ಮಳೆಯಾಗಿದ್ದರೆ ಕಾವೇರಿ ನೀರನ್ನು ತಮಿಳುನಾಡಿಗೂ ಹರಿಸಬಹುದಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಯೋಚಿಸಲೇಬೇಕಾಗಿದೆ.

ರಾಜ್ಯದಲ್ಲಿ ಮಳೆಯಿಲ್ಲದೆ ಇದ್ದರು ತಮಿಳುನಾಡು ಮಾತ್ರ ಮಾಮೂಲಿಯಂತೆ ಕ್ಯಾತೆ ತೆಗೆಯುತ್ತಲೇ ಇದೆ. ಈ ಬಗ್ಗೆ ಸಂಸದೆ ಸುಮಲತಾ‌ ಮಾತನಾಡಿದ್ದು, ಕಾವೇರಿ ವಿಚಾರದಲ್ಲಿ ಪಕ್ಷ ಭೇದ ಮರೆತು ಎಲ್ಲರೂ ಒಂದಾಗಬೇಕು ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸುಮಲತಾ, ನಾಡು, ನುಡಿ, ಜಲ ವಿಚಾರದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡಬಾರದು. ರಾಜ್ಯದ ರೈತರಿಗೆ, ಜನರಿಗೆ ಸಮಸ್ಯೆಯಾದರೆ ಎಲ್ಲರು ಒಂದಾಗಬೇಕು. ಇದರಲ್ಲಿ ರಾಜಕೀಯ, ಪಕ್ಷ ಅಂತ ಇರಬಾರದು. ಕಾವೇರಿ‌ ಕಣಿವೆಯಲ್ಲಿ ನಾಲ್ಕು ವರ್ಷದಿಂದ ಉತ್ತಮ ಮಳೆಯಾಗಿತ್ತು. ಈ ವರ್ಷ ಮಳೆಯೂ ಆಗಿಲ್ಲ, ನೀರು ಇಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಕಾವೇರಿ ನೀರು ಪ್ರಾಧಿಕಾರಕ್ಕೂ ಮನವಿ ಮಾಡಬೇಕು. ಅದರ ಜೊತೆಗೆ ಕೇಂದ್ರ ಸರ್ಕಾರಕ್ಕೂ ಈ ಸಂಬಂಧ ಪತ್ರ ಬರೆದಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!