Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಟ್ಟು ಬೋಲ್ಟ್ ಟೈಟ್ ಟಾಪಿಕ್ ನಡುವೆ ತರುಣ್ ಸುಧೀರ್ ಸಿನಿಮಾಗೆ ಬಿತ್ತು ದಂಡ..!

---Advertisement---

ತುಮಕೂರು; ಅಂತರಾಷ್ಟ್ರೀಯ ಚಲನಚಿತ್ರೋವಕ್ಕೆ ಚಂದನವನದ ಮಂದಿಯೇ ಬಾರದಿದ್ದಕ್ಕೆ ಆಕ್ರೋಶಗೊಂಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ನಟ್ಟು, ಬೋಲ್ಟ್ ಟೈಟ್ ಮಾಡ್ತೇನೆ ಎಂದಿದ್ದರು. ಈ ವಿಚಾರ ಪರ ವಿರೋಧದ ಚರ್ಚೆ ಹುಟ್ಟು ಹಾಕಿರುವಾಗಲೇ, ತರುಣ್ ಸುಧೀರ್ ಸಿನಿಮಾಗೆ ದಂಡ ಬಿದ್ದಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಂದ ರಾಣಾ ಸಿನಿಮಾಗೆ ದಂಡ ವಿಧಿಸಲಾಗಿದೆ.

ನಿರ್ದೇಶಕ ತರುಣ್ ಸುಧೀರ್ ಪ್ರೊಡಕ್ಷನ್ ನಲ್ಲಿ ನಟಿ ರಕ್ಷಿತಾ ತಮ್ಮ ರಾಣಾ ಅವರ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಇದು ಕಳೆದ ಐದು ದಿನಗಳಿಂದ ತುಮಕೂರಿನ ನಾಮದ ಚಿಲುಮೆಯಲ್ಲಿ ನಡೆಯುತ್ತಿದೆ. ಅನುಮತಿ ಇಲ್ಲದೆ ಚಿತ್ರೀಕರಣ ಮಾಡುತ್ತಿದ್ದ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರೀಕರಣವನ್ನ ನಿಲ್ಲಿಸಿ, ಕ್ಯಾರಾವಾನ್, ಲೈಟ್, ಕ್ಯಾಮೆರಾ ಲೈಟ್, ಅಡುಗೆ ಸಾಮಾಗ್ರಿ, ಟೆಂಪೋವನ್ನ ವಶಕ್ಕೆ ಪಡೆದಿದ್ದಾರೆ. ಸದ್ಯ ಈ ಚಿತ್ರೀಕರಣ ನಿಂತಿದೆ.

ಈ ಸಂಬಂಧ ಮಾತನಾಡಿರುವ ತರುಣ್ ಸುಧೀರ್, ನಾವೂ ಕಾಡಿನಲ್ಲಿ ಶೂಟಿಂಗ್ ಮಾಡಿರೋದಲ್ಲ. ಒಂದು ಬಾರ್ ಅಂಡ್ ರೆಸ್ಟೋರೆಂಟ್ ಸೃಷ್ಟಿಸಿ ಶೂಟಿಂಗ್ ಮಾಡೋದಕ್ಕೆ ಹೊರಟಿದ್ವಿ. ಮಾರ್ಗ ಮಧ್ಯೆ ನಮ್ಮ ಪ್ರೊಡಕ್ಷನ್ ವಾಹನ ನಿಲ್ಲಿಸಿದ್ವಿ. ಊಟಕ್ಕೆಂದು ಪಕ್ಕದಲ್ಲಿಯೇ ಒಂದು ಲೈಟ್ ಹಾಕಲಾಗಿತ್ತು. ಇದನ್ನ ನೋಡಿದ ಯಾರೋ ವ್ಯಕ್ತಿ ಶೂಟಿಂಗ್ ನಡೆಯುತ್ತಿದೆ ಎಂದು ಭಾವಿಸಿ, ದೂರು ನೀಡಿದ್ದಾರೆ. ನಮಗೆ ಅದು ಫಾರೆಸ್ಟ್ ಎಂಟ್ರಿ, ನಾಮಚಿಲುಮೆ ಇರುವ ಜಾಗ ಎಂದು ಗೊತ್ತಿರಲಿಲ್ಲ. ನಮ್ಮ ಸಿನಿಮಾದ ವಸ್ತುಗಳನ್ನ ಸೀಜ್ ಮಾಡಿಲ್ಲ. ದಂಡ ಹಾಕಿದ್ರು ಕಟ್ಟಿದ್ದೀವಿ ಅಷ್ಟೇ ಎಂದು ನಿರ್ದೇಶಕ ತರುಣ್ ಸುಧೀರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...