Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಕು ನಾಯಿಗೋಸ್ಕರ ಬ್ರಿಟನ್ ಪ್ರಶಸ್ತಿಯನ್ನೇ ತಿರಸ್ಕರಿಸಿದ್ದರು ಟಾಟಾ..!

---Advertisement---

ದೇಶದ ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ ಇಂದು ದೈಹಿಕವಾಗಿ ಜೀವಂತವಾಗಿ ಇಲ್ಲ. ಇವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಆದರೆ ಇವರ ಬಗ್ಗೆ ಒಂದಷ್ಟು ಇಂಟ್ರೆಸ್ಟಿಂಗ್ ವಿಚಾರಗಳು ಇಲ್ಲಿವೆ ನೋಡಿ.

ಉದ್ಯಮದಲ್ಲಿ ಸಾಮ್ರಾಜ್ಯವನ್ನೇ ನಿರ್ಮಿಸಿದವರು ರತನ್ ಟಾಟಾ. ಆದರೆ ಹೆಚ್ಚು ಪ್ರಾಣಿ ಪ್ರಿಯರಾಗಿದ್ದರು. ನಾಯಿಗಳು ಎಂದರೆ ಇನ್ನಿಲ್ಲದ ಪ್ರೀತಿ. ತಮ್ಮ ಸಾಕು ನಾಯಿಗೋಸ್ಕರ ಬ್ರಿಟನ್ ನ ರಾಜಮನೆತನದ ಪ್ರಶಸ್ತಿಯನ್ನೇ ತಿರಸ್ಕರಿಸಿದ್ದರು. 2018ರ ಫೆಬ್ರವರಿ 6ರಂದು ಬ್ರಿಟನ್ ನ ರಾಜಮನೆತನದ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಕಾರ್ಯಕ್ರಮ ಒಂದನ್ನ ಆಯೋಜಿಸಲಾಗಿತ್ತು. ಅಂದು ಸಮಾರಂಭ ಸಭೆಯಲ್ಲಿ ರತನ್ ಟಾಟಾ ಅವರಿಗೆ ಲೋಕೋಪಕಾರಿ ಕೆಲಸಕ್ಕೆ ಜೀವಮಾನದ ಸಾಧನೆಯ ಪ್ರಶಸ್ತಿ ನೀಡಿ ಗೌರವಿಸಲು ಬಯಸಿದ್ದರು. ಆ ಕಾರ್ಯಕ್ರಮಕ್ಕೆ ರತನ್ ಟಾಟಾ ಅವರು ಹೋಗಬೇಕಾಗಿತ್ತು. ಆದರೆ ರತನ್ ಟಾಟಾ ಅವರು ಹೋಗಲಿಲ್ಲ. ಅದಕ್ಕೆ ಕಾರಣ ಅವರ ಸಾಕು ನಾಯಿ. ಕೇಳಲು ಆಶ್ಚರ್ಯವೆನಿಸಿದರು, ಇದು ಸತ್ಯ.

ರತನ್ ಟಾಟಾ ಅವರ ಒಂದು ಸಾಕು ನಾಯಿಗೆ ಅನಾರೋಗ್ಯ ಕಾಡಿತ್ತು. ಅದಕ್ಕೆ ಕಾಯಿಲೆ ಇದೆ ಅದನ್ನು ಬಿಟ್ಟು ಬರಲು ಸಾಧ್ಯವಿಲ್ಲ ಎಂದು ಹೇಳಿದ್ದರಂತೆ‌. ರತನ್ ಟಾಟಾ ಅವರ ಮನವೊಲಿಸುವ ಪ್ರಯತ್ನ ನಡೆದರು ಅದು ಸಾಧ್ಯವಾಗಿರಲಿಲ್ಲವಂತೆ. ರತನ್ ಟಾಟಾ ಅವರು ಕಾರ್ಯಕ್ರಮಕ್ಕೆ ಬಾರದೆ ಇದ್ದ ಕಾರಣ ರಾಜಕುಮಾರ ಚಾರ್ಲ್ಸ್ ಅವರಿಗೂ ತಿಳಿಯಿತು. ಆಗ ಅವರು, ಮನುಷ್ಯನೆಂದರೆ ಹೀಗಿರಬೇಕು. ರತನ್ ಟಾಟಾ ಅದ್ಭುತ ವ್ಯಕ್ತಿ ಎಂದು ಹೇಳಿದ್ದರು‌. ಅದೆಲ್ಲವನ್ನು ಅಂಕಣಕಾರ ಸುಹೇಲ್ ಅವರು ಸಂದರ್ಶನವೊಂದರಲ್ಲಿ ನೆನಪಿಸಿಕೊಂಡಿದ್ದಾರೆ. ಇದು ರತನ್ ಟಾಟಾ ಅವರುಗೆ ತಮ್ಮ ಸಾಕು ನಾಯಿಗಳ ಮೇಲಿದ್ದ ಪ್ರೀತಿಯನ್ನು ತೋರಿಸುತ್ತದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment