ಸಾಕು ನಾಯಿಗೋಸ್ಕರ ಬ್ರಿಟನ್ ಪ್ರಶಸ್ತಿಯನ್ನೇ ತಿರಸ್ಕರಿಸಿದ್ದರು ಟಾಟಾ..!

ದೇಶದ ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ ಇಂದು ದೈಹಿಕವಾಗಿ ಜೀವಂತವಾಗಿ ಇಲ್ಲ. ಇವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಆದರೆ ಇವರ ಬಗ್ಗೆ ಒಂದಷ್ಟು ಇಂಟ್ರೆಸ್ಟಿಂಗ್ ವಿಚಾರಗಳು ಇಲ್ಲಿವೆ ನೋಡಿ.

ಉದ್ಯಮದಲ್ಲಿ ಸಾಮ್ರಾಜ್ಯವನ್ನೇ ನಿರ್ಮಿಸಿದವರು ರತನ್ ಟಾಟಾ. ಆದರೆ ಹೆಚ್ಚು ಪ್ರಾಣಿ ಪ್ರಿಯರಾಗಿದ್ದರು. ನಾಯಿಗಳು ಎಂದರೆ ಇನ್ನಿಲ್ಲದ ಪ್ರೀತಿ. ತಮ್ಮ ಸಾಕು ನಾಯಿಗೋಸ್ಕರ ಬ್ರಿಟನ್ ನ ರಾಜಮನೆತನದ ಪ್ರಶಸ್ತಿಯನ್ನೇ ತಿರಸ್ಕರಿಸಿದ್ದರು. 2018ರ ಫೆಬ್ರವರಿ 6ರಂದು ಬ್ರಿಟನ್ ನ ರಾಜಮನೆತನದ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಕಾರ್ಯಕ್ರಮ ಒಂದನ್ನ ಆಯೋಜಿಸಲಾಗಿತ್ತು. ಅಂದು ಸಮಾರಂಭ ಸಭೆಯಲ್ಲಿ ರತನ್ ಟಾಟಾ ಅವರಿಗೆ ಲೋಕೋಪಕಾರಿ ಕೆಲಸಕ್ಕೆ ಜೀವಮಾನದ ಸಾಧನೆಯ ಪ್ರಶಸ್ತಿ ನೀಡಿ ಗೌರವಿಸಲು ಬಯಸಿದ್ದರು. ಆ ಕಾರ್ಯಕ್ರಮಕ್ಕೆ ರತನ್ ಟಾಟಾ ಅವರು ಹೋಗಬೇಕಾಗಿತ್ತು. ಆದರೆ ರತನ್ ಟಾಟಾ ಅವರು ಹೋಗಲಿಲ್ಲ. ಅದಕ್ಕೆ ಕಾರಣ ಅವರ ಸಾಕು ನಾಯಿ. ಕೇಳಲು ಆಶ್ಚರ್ಯವೆನಿಸಿದರು, ಇದು ಸತ್ಯ.

ರತನ್ ಟಾಟಾ ಅವರ ಒಂದು ಸಾಕು ನಾಯಿಗೆ ಅನಾರೋಗ್ಯ ಕಾಡಿತ್ತು. ಅದಕ್ಕೆ ಕಾಯಿಲೆ ಇದೆ ಅದನ್ನು ಬಿಟ್ಟು ಬರಲು ಸಾಧ್ಯವಿಲ್ಲ ಎಂದು ಹೇಳಿದ್ದರಂತೆ‌. ರತನ್ ಟಾಟಾ ಅವರ ಮನವೊಲಿಸುವ ಪ್ರಯತ್ನ ನಡೆದರು ಅದು ಸಾಧ್ಯವಾಗಿರಲಿಲ್ಲವಂತೆ. ರತನ್ ಟಾಟಾ ಅವರು ಕಾರ್ಯಕ್ರಮಕ್ಕೆ ಬಾರದೆ ಇದ್ದ ಕಾರಣ ರಾಜಕುಮಾರ ಚಾರ್ಲ್ಸ್ ಅವರಿಗೂ ತಿಳಿಯಿತು. ಆಗ ಅವರು, ಮನುಷ್ಯನೆಂದರೆ ಹೀಗಿರಬೇಕು. ರತನ್ ಟಾಟಾ ಅದ್ಭುತ ವ್ಯಕ್ತಿ ಎಂದು ಹೇಳಿದ್ದರು‌. ಅದೆಲ್ಲವನ್ನು ಅಂಕಣಕಾರ ಸುಹೇಲ್ ಅವರು ಸಂದರ್ಶನವೊಂದರಲ್ಲಿ ನೆನಪಿಸಿಕೊಂಡಿದ್ದಾರೆ. ಇದು ರತನ್ ಟಾಟಾ ಅವರುಗೆ ತಮ್ಮ ಸಾಕು ನಾಯಿಗಳ ಮೇಲಿದ್ದ ಪ್ರೀತಿಯನ್ನು ತೋರಿಸುತ್ತದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago