Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಕರ ತಲೆಗೆ ಬಕೆಟ್ ಮುಚ್ಚಿದರೂ ಬರಲಿಲ್ಲ ಕೋಪ : ಕಡೆಗೆ ಕಾಲಿಗೆ ಬಿದ್ದು ಕ್ಷಮೆ ಕೇಳಿದ ವಿದ್ಯಾರ್ಥಿಗಳು..!

Facebook
Twitter
Telegram
WhatsApp

ದಾವಣಗೆರೆ: ಗುರು ದೇವರಿಗೆ ಸಮಾನ. ಅವರಿಗೆ ತಲೆ ಬಾಗಿ‌ ನಮಿಸಿದರೆ ಸರಸ್ವತಿಯ ಆಶೀರ್ವಾದ ವಿದ್ಯಾರ್ಥಿಗೆ ಸಿಗದೆ ಇರದು. ಆದ್ರೆ ಅಂಥ ಮಹಾನ್ ಗುರುಗಳನ್ನೇ ಅವಮಾನಿಸೋದು ಎಷ್ಟರಮಟ್ಟಿಗೆ ಸರಿ ಅಲ್ವಾ.. ಅಂಥದ್ದೊಂದು ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ವಿದ್ಯಾರ್ಥಿಗಳಲ್ಲಿ ತುಂಟತನ ಇರೋದು ಸಹಜ. ಆದ್ರೆ ಆ ತುಂಟತನ ಶಿಕ್ಷಕರಿಗೆ ಖುಷಿ ಕೊಡಬೇಕೆ ವಿನಃ ನೋವು ಕೊಡಬಾರದು. ಈ ಶಾಲೆಯ ವಿದ್ಯಾರ್ಥಿಗಳು ಮಾಡಿದ ತಪ್ಪು ಅಂತಿದ್ದಲ್ಲ. ವಿಡಿಯೋ ನೋಡಿದ ಪ್ರತಿಯೊಬ್ಬರಿಗೂ ಕೋಪ ನೆತ್ತಿಗೇರುತ್ತೆ. ಯಾಕಂದ್ರೆ ಹಿರಿಯ ಶಿಕ್ಷಕರೊಬ್ಬರಿಗೆ ಮಾಡ ಬಾರದ ರೀತಿಯಲ್ಲಿ ಅವಮಾನ ಮಾಡಿದ್ದಾರೆ.

ಡಸ್ಟ್ ಬಿನ್ ಶಿಕ್ಷಕರ ತಲೆಗೆ ಹಾಕಿದ್ದಾರೆ. ಕುಣಿದು ಕೀಟಲೆ ಮಾಡಿದ್ದಾರೆ. ಇಷ್ಟೆಲ್ಲ ಮಾಡಿದ್ರು ಆ ಶಿಕ್ಷಕ ಪ್ರಕಾಶ್ ಎಂಬುವವರಿಗೆ ಮಾತ್ರ ಮಕ್ಕಳ ಮೇಲೆ ಕೋಪ ಬಂದಿಲ್ಲ. ಸಮಾಧಾನವಾಗಿಯೇ ಮಾತನಾಡಿದ್ದಾರೆ. ಈ ಘಟನೆ ನಡೆದಿರೋದು ಡಿಸೆಂಬರ್ 3 ರಂದು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಹತ್ತನೇ ತರಗತಿ ನಾಲ್ವರು ವಿದ್ಯಾರ್ಥಿಗಳಿಂದ ಈ ಘಟನೆ ನಡೆದಿದೆ. ಶಿಕ್ಷಕ ಪ್ರಕಾಶ್ ಗೆ ರಿಟೈಡ್ ಆಗಲು ಇನ್ನು ಒಂದು ವರ್ಷ ಬಾಕಿ ಇದೆ. ಜೊತೆಗೆ ಅವರಿಗೆ ಹೃದಯ ಸಂಬಂಧಿ ಕಾಯಿಲೆಯೂ ಇದೆ. ಹೀಗಿರುವಾಗ ಮಕ್ಕಳು ಈ ರೀತಿಯೆಲ್ಲಾ ಮಾಡೋದಾ..? ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ. ವಿದ್ಯಾರ್ಥಿಗಳನ್ನ ಅಮಾನತು ಮಾಡಬೇಕೆಂಬ ಮಾತುಗಳು ಕೇಳಿ ಬಂದಿತ್ತು. ಈ ಬೆನ್ನಲ್ಲೇ ವಿದ್ಯಾರ್ಥಿಗಳೆಲ್ಲಾ ಆ ಶಿಕ್ಷಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ. ಗುರುಗಳ ಮನಸ್ಸು ಗೊತ್ತಲ್ವಾ ಅವರದು ಕ್ಷಮಿಸಿದ್ದಾರೆ. ಆದ್ರೆ ಯಾವುದೇ ವಿದ್ಯಾರ್ಥಿಗಳು ಮತ್ತೆಂದು ಇಂಥ ತಪ್ಪನ್ನು ಮಾಡದಿರಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!