Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಿಕ್ಷಕರು ಕಲಿಕಾ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಅಗತ್ಯವಿದೆ : ಯೋಗೀಶ್ ಸಹ್ಯಾದ್ರಿ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 28 : ಬಹುಭಾಷಾ ಪಾಂಡಿತ್ಯ, ಪ್ರಭುತ್ವ ಸಾಧನೆಯ ಉತ್ತುಂಗಕ್ಕೇರಲು ಸಾಧನ. ವಿಶ್ವದ ಪ್ರತಿಯೊಂದು ಭಾಷೆಯಲ್ಲಿಯೂ ಜ್ಞಾನದ, ಬದುಕಿನ ಅಗಾಧ ಕಣಜ ತುಂಬಿದೆ ಎಂದು ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ ಅಭಿಪ್ರಾಯಪಟ್ಟರು.

ನಗರದ ರೋಟರಿ ಶಾಲೆ ವತಿಯಿಂದ ಶಿಕ್ಷಕರಿಗಾಗಿ ಆಯೋಜಿಸಲಾಗಿದ್ದ ಒಂದು ತಿಂಗಳ ಸ್ಪೋಕನ್ ಇಂಗ್ಲಿಷ್ ಕಾರ್ಯಾಗಾರ ಮುಕ್ತಾಯ ಸಮಾರಂಭದಲ್ಲಿ ರೋಟರಿ ಟ್ರಸ್ಟ್ ನ ಸನ್ಮಾನ ಸ್ವೀಕರಿಸಿ ಮಾತನಾಡಿದ ಯೋಗೀಶ್ ಸಹ್ಯಾದ್ರಿ ಅವರು, ಶಿಕ್ಷಕರು ವಿದ್ಯಾರ್ಥಿಗಳನ್ನು ಜ್ಞಾನಿಗಳು ಹಾಗೂ ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿ ಮಾಡುವ ಗುರುತರ ಜವಾಬ್ದಾರಿ ಹೊಂದಿದ್ದಾರೆ.
ಆದ್ದರಿಂದ ನಮ್ಮ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಅಗತ್ಯವಿದೆ. ನಿರಂತರ ಕಲಿಕೆ ಯಶಸ್ಸಿನ ಗುಟ್ಟು ಮತ್ತು ಅಭಿನಂದನಾರ್ಹವಾದುದು ಎಂದು ತಿಳಿಸಿದರು.

ರೋಟರಿ ಶಾಲೆಯು ಹಲವು ವರ್ಷಗಳಿಂದ ನಗರದ ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅತಿ ಕಡಿಮೆ ವೆಚ್ಚದಲ್ಲಿ ಉತ್ತಮ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿ ಎಂದು ಆಶಿಸಿದರು.

ರೋಟರಿ ಶಾಲಾ ಟ್ರಸ್ಟ್ ನ ಕಾರ್ಯದರ್ಶಿ ರೊ. ಪಿ.ಹೆಚ್.ಎಫ್, ಪಿ.ಡಿ.ಜಿ ಮಧುಪ್ರಸಾದ್ ಕೆ ಮಾತನಾಡಿ, ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ ವತಿಯಿಂದ ಒಂದು ತಿಂಗಳ ಕಾರ್ಯಾಗಾರ ಯಶಸ್ವಿಯಾಗಿದೆ. ನಮ್ಮ ಶಾಲೆಯ ಶಿಕ್ಷಕರು ಉತ್ತಮ ರೀತಿಯಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಇದರಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಯೋಜನ ಆಗಬೇಕಾಗಿದೆ. ಆಗ ಮಾತ್ರ ಶಿಕ್ಷಕರ ಹಾಗೂ ಆಡಳಿತ ಮಂಡಳಿಯ ಶ್ರಮ ಫಲ ನೀಡಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಟ್ರಸ್ಟ್ ನ ಸದಸ್ಯರಾದ ರೊ. ಚಂದ್ರಮೋಹನ್ ಕೆ.ಎಸ್, ರೋಟರಿ ಕ್ಲಬ್ ಅಧ್ಯಕ್ಷರಾದ ವೀರಣ್ಣ ಜಿ.ಎನ್, ಕಾರ್ಯದರ್ಶಿ ಶಿವಣ್ಣ ಕುರುಬರಳ್ಳಿ, ಶಾಲಾ ಮುಖ್ಯ ಶಿಕ್ಷಕಿ ಉಮಾದೇವಿ, ಮತ್ತಿತರ ಸದಸ್ಯರು ಉಪಸ್ಥಿತರಿದ್ದರು. ಝೀನತ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಶಾಲೆ ಶಿಕ್ಷಕರಾದ ಜಯಣ್ಣ, ಉಮೇಶ್, ನಿರ್ಮಲ, ಜ್ಯೋತಿ, ಶಾಹಿದ್, ಸೌಮ್ಯ, ಸುಮಾರಾಣಿ, ಝೀನತ್, ಶಮೀಮ್ ಬಾನು, ಮಲ್ಲಿಕಾ, ಜಯಲಕ್ಷ್ಮಿ, ಅನುಷ, ರಜಿಯಾ ಬೇಗಂ ಇನ್ನಿತರರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment