Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಮೂಡಲು ಶ್ರಮಿಸಬೇಕು : ಚಳ್ಳಕೆರೆ ಯರ್ರಿಸ್ವಾಮಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್.21 :  ಶಿಕ್ಷಕರು ಮೂಲ ವಿಜ್ಞಾನಕ್ಕೆ ಒತ್ತು ನೀಡುವ ಮೂಲಕ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ವೈಜ್ಞಾನಿಕ ಚಿಂತನೆ ಮೂಡಲು ಶ್ರಮಿಸಬೇಕು” ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ಉಪಾಧ್ಯಕ್ಷ ಚಳ್ಳಕೆರೆ ಯರ್ರಿಸ್ವಾಮಿ ತಿಳಿಸಿದರು.

ನಗರದ ಸಿಲಿಕಾನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ನಡೆದ 31 ನೇ ಜಿಲ್ಲಾ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಮಕ್ಕಳಿಗೆ ಯೋಜನೆಗಳನ್ನು ತಯಾರಿಸಲು ಪ್ರೇರೇಪಿಸಬೇಕು” ಎಂದು ತಿಳಿಸಿದರು.

ರಾಜ್ಯ ಮಟ್ಟದಲ್ಲಿ ತೀರ್ಪುಗಾರರಾದ ಈ.ರುದ್ರಮುನಿ ಮಾತನಾಡಿ,ಮಕ್ಕಳು ಯೋಜನೆಗಳನ್ನು ತಯಾರಿಸುವಾಗ ಪ್ರಮುಖ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವರಿಕೆ ಮಾಡಿಕೊಟ್ಟರು.

ಜಿಲ್ಲಾ ಸಮಾವೇಶದ ಸಂಚಾಲಕ ಹೆಚ್.ಮಂಜುನಾಥ್ ಮಾತನಾಡಿ, ” ಜಿಲ್ಲಾ ಸಮಾವೇಶವು ಡಿಸೆಂಬರ್ ತಿಂಗಳ ಮೊದಲ ವಾರ ನಡೆಯಲಿದ್ದು, ಜಿಲ್ಲೆಯಿಂದ 10 ಯೋಜನೆಗಳನ್ನು ಆಯ್ಕೆ ಮಾಡಿ ರಾಜ್ಯ ಮಟ್ಟಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

ವೇದಿಕೆಯಲ್ಲಿ ಜಿಲ್ಲಾ ಸಮಿತಿಯ ಮಾಜಿ ಅಧ್ಯಕ್ಷರಾದ  ಲತೀಫ್ ಸಾಬ್,  ಮುಖ್ಯ ಶಿಕ್ಷಕ ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ 72 ವಿಜ್ಞಾನ ಶಿಕ್ಷಕರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...