ನವದೆಹಲಿ: ಹಲವು ವರ್ಷಗಳ ಬಳಿಕ ಟೀಂ ಇಂಡಿಯಾ ವಿಶ್ವಕಪ್ ಗೆದ್ದು ಬೀಗಿದೆ. ಈ ಸಂತಸವನ್ನು ಇಡೀ ದೇಶವೇ ಸಂಭ್ರಮಿಸಿದೆ, ಟೀಂ ಇಂಡಿಯಾ ಆಟಗಾರರನ್ನು ಕೊಂಡಾಡಿದ್ದಾರೆ. ಗೆದ್ದ ಮರುದಿನವೇ ಈ ಯಶಸ್ಸನ್ನು ಸಂಭ್ರಮಿಸಬೇಕೆಂದುಕೊಂಡಿದ್ದ ಕ್ರಿಕೆಟ್ ಪ್ರೇಮಿಗಳು ಅದು ಸಾಧ್ಯವಾಗಲಿಲ್ಲ. ಚಂಡಮಾರುತದಿಂದಾಗಿ ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಮರಳಲಿಲ್ಲ. ಬೆರಿಲ್ ಚಂಡಮಾರುತಕ್ಕೆ ಸಿಲುಕಿ ಟೀಂ ಇಂಡಿಯಾ ಆಟಗಾರರು ಬಾರ್ಬಡಾಸ್ ನಲ್ಲಯೇ ಲಾಕ್ ಆಗಿ ಬಿಟ್ಟರು. ಆದರೆ ಇದೀಗ ವಿಶೇಷ ವಿಮಾನದ ಮೂಲಕ ಭಾರತದ ತಂಡದ ನಾಯಕರು ತವರಿಗೆ ಬರುತ್ತಿದ್ದಾರೆ.
ಬಿಸಿಸಿಐ ವ್ಯವಸ್ಥೆ ಮಾಡಿರುವ ಚಾರ್ಟರ್ ಫ್ಲೈಟ್ ಮೂಲಕ ಟೀಂ ಇಂಡಿಯಾ ಆಟಗಾರರು ನಾಳೆ ದೆಹಲಿಗೆ ಬಂದಿಳಿಯಲಿದ್ದಾರೆ. ನಾಳೆ ಅಂದ್ರೆ ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ತೆರೆದ ಬಸ್ ನಲ್ಲಿ ಭಾರತ ತಂಡವನ್ನು ಟ್ರೋಪಿಯೊಂದಿಗೆ ಮೆರವಣಿಗೆ ಮಾಡಲಿದ್ದಾರೆ. ಮೆರವಣಿಗೆ ಮೂಲಕ ವಾಂಖೇಡೆ ಕ್ರೀಡಾಂಗಣಕ್ಕೆ ಕರೆದೊಯ್ಯುತ್ತಾರೆ. ಈ ರೋಡ್ ಶೋನಲ್ಲಿ ಭಾರತದ ಎಲ್ಲಾ ಆಟಗಾರರು ಟ್ರೋಫಿಯೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಬೇಕೆಂದು ಬಿಸಿಸಿಐ ಸೂಚನೆ ನೀಡಿದೆ.
ಟೀಂ ಇಂಡಿಯಾ ತಂಡಕ್ಕೆ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಅವರು 125 ಕೋಟಿ ಬಹುಮಾನವನ್ನು ಘೋಷಣೆ ಮಾಡಿದ್ದರು. ಈ ಕಾರ್ಯಕ್ರಮದಲ್ಲಿಯೇ ಬಹುಮಾನದ ಹಣವನ್ನು ನೀಡಲಿದ್ದಾರೆ. ಈ ವಿಜಯೋತ್ಸವ ಆಚರಣೆ ಮಾಡಲು ಫ್ಯಾನ್ಸ್ ಗೂ ಕರೆ ನೀಡಲಾಗಿದೆ. ಕ್ರಿಕೆಟ್ ಅಭಿಮಾನಿಗಳಿಗೆ ಜೈ ಶಾ ಕರೆ ನೀಡಿದ್ದು, ವಾಂಖೆಡೆ ಕ್ರೀಡಾಂಗಣದಲ್ಲಿ ಹಾಜರಾಗುವ ಮೂಲಕ ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ವಿಶ್ವಕಪ್ ಗೆದ್ದಿರುವ ಸಂಭ್ರಮದಲ್ಲಿ ಭಾಗಿಯಾಗಲು ಫ್ಯಾನ್ಸ್ ಕೂಡ ಕಾತುರದಿಂದ ಕಾಯುತ್ತಿದ್ದಾರೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ಯಾಟ್ನಿಂದ ರನ್ಗಳನ್ನು ನಿರೀಕ್ಷಿಸುತ್ತಾರೆ.…