Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೀಂ ಇಂಡಿಯಾ ಆಟಗಾರ ಚಹಲ್ ಹಾಗೂ ಧನುಶ್ರೀ ಡಿವೋರ್ಸ್ ಅಧಿಕೃತ : ಪರಿಹಾರ ಕೊಟ್ಟಿದ್ದು ಎಷ್ಟು ಕೋಟಿ..?

---Advertisement---

ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ನಟಿ ಧನುಶ್ರೀ ಅವರ ಡಿವೋರ್ಸ್ ವಿಚಾರ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿತ್ತು. ಇಬ್ಬರು ಅಧಿಕೃತವಾಗಿ ಹೇಳಿರಲಿಲ್ಲ. ಆದರೆ ಈಗ ಡಿವೋರ್ಸ್ ವಿಚಾರಕ್ಕೆ ಅಧಿಕೃತ ಮುದ್ರೆ ಬಿದ್ದಿದೆ. ಇದೀಗ ಬಾಂಧ್ರಾ ಪ್ಯಾಮಿಲಿ ಕೋರ್ಟ್ ಇಬ್ಬರ ಅರ್ಜಿಯನ್ನು ಪುರಸ್ಕರಿಸಿ, ವಿಚ್ಚೇದನ ಮಂಜೂರು ಮಾಡಿದೆ. ಈ ಮೂಲಕ ಗಾಸಿಪ್ ಸುದ್ದಿ ನಿಜವಾಗಿದೆ.

ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದು, ಇಬ್ಬರು ಒಪ್ಪಿಗೆ ಮೇರೆಗೆ ಡಿವೋರ್ಸ್ ಪಡೆದಿದ್ದಾರೆ. ವೈಯಕ್ತಿಕ ಜೀವನದಲ್ಲಿ ಹೊಂದಾಣಿಕೆಯಾಗುತ್ತಿಲ್ಲ ಎಂದು ಕೋರ್ಟ್ ಗೆ ಕಾರಣ ನೀಡಿ, ಡಿವೋರ್ಸ್ ಪಡೆದಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಕೂಡ ಹಾಕಿದ್ದಾರೆ. ಚಹಲ್ ತಮ್ಮ ಮಾಜಿ ಪತ್ನಿ ಧನುಶ್ರೀಗೆ 60 ಕೋಟಿ ಜೀವನಾಂಶ ನೀಡಲು ಒಪ್ಪಿದ್ದಾರೆಂದು ಸುದ್ದಿಯಾಗಿದೆ. ಆದರೆ ಈ ಬಗ್ಗೆ ಇಬ್ಬರು ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ.

 

2020ರಲ್ಲಿ ಯಜುವೇಂದ್ರ ಚಹಾಲ್ ಹಾಗೂ ಧನುಶ್ರೀ ನಡುವೆ ಲವ್ವಾಗಿತ್ತು. ಆ ವರ್ಷವೇ ಇಬ್ಬರು ಮದುವೆಯನ್ನು ಆದ್ರೂ. ಕಳೆದ ಎರಡು ವರ್ಷದ ಹಿಂದೆಯೇ ಇಬ್ಬರು ದೂರಾಗಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಸೋಷಿಯಲ್ ಮೀಡಿಯಾದಲ್ಲಿ ಒಬ್ವರಿಗೊಬ್ಬರು ಅನ್ ಫಾಲೋ ಮಾಡಿಕೊಂಡಿದ್ದರು. ಆಗ ಅನುಮಾನ ಇನ್ನು ದಟ್ಟವಾಗಿತ್ತು. ಆದರೆ ಧನುಶ್ರೀ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಚಹಲ್ ಜೊತೆಗಿನ ಫೋಟೋಗಳನ್ನ ಡಿಲೀಟ್ ಮಾಡಿರಲಿಲ್ಲ. ಇದೀಗ ಅಧಿಕೃತವಾಗಿಯೇ ಇಬ್ಬರು ದೂರ ದೂರ ಆಗಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾದಲ್ಲೂ ಘೋಷಣೆ ಮಾಡಿಕೊಂಡಿದ್ದಾರೆ. ಇದು ಇಬ್ಬರು ಅಭಿಮಾನಿಗಳಿಗೂ ಬೇಸರ ತರಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment