Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಬರಲು ಹರಸಾಹಸ..!

---Advertisement---

 

 

ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ಭಾರತದಲ್ಲಿ ಸಂತಸ ಮನೆ ಮಾಡಿದೆ. ಆ ಸೆಲೆಬ್ರೆಷನ್ ಆಚರಿಸಲು ಆಟಗಾರರುಗಾಗಿ ಕಾಯುತ್ತಿದೆ. ಗೆದ್ದ ದಿನವೇ ಎಲ್ಲೆಡೆ ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದರು. ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಗೆಲುವಿನ ಜೊತೆಗೆ ಬರುವುದೇ ಒಂದು ಸಂಭ್ರಮ ಅಲ್ಲವೇ. ಆದರೆ ಚಂಡಮಾರುತದ ಪರಿಣಾಮದಿಂದ ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ.

ಬಾರ್ಬಡೋಸ್ ನಲ್ಲಿ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ಬಿರುಗಾಳಿ ಸಹಿತ ಮಳೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿದೆ. ಗಂಟೆಗೆ 130 ಕಿಲೋ ಮೀಟರ್ ನಷ್ಟು ಗಾಳಿ ಬೀಸುತ್ತಿದೆ. ಹೀಗಾಗಿ ರಸ್ತೆಯ ಮೇಲೆ ವಾಹನ ಸವಾರರಿಗೆ ಸಂಚಾರ ಸಂಕಷ್ಟ ತಂದೊಡ್ಡಿದೆ. ಒದರ ನಡುವೆ ವಿಮಾನ ಸಂಚಾರವೂ ರದ್ದಾಗಿದೆ. ವಾತಾವರಣ ಬದಲಾವಣೆಯಾಗಿರುವ ಕೆಲವೊಂದು ವಿಮಾನಗಳು ರದ್ದಾಗಿವೆ. ಹೀಗಾಗಿ ಟೀಂ ಇಂಡಿಯಾ ಬಾರ್ಬಡೋಸ್ ನಲ್ಲಿಯೇ ಉಳಿದುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ.

ಅಂದುಕೊಂಡ ದಿನವೇ ಟೀಂ ಇಂಡಿಯಾ ಪ್ರಯಾಣ ಬೆಳೆಸಿದ್ದರೆ ಇಷ್ಟೊತ್ತಿಗೆ ನ್ಯೂಯಾರ್ಕ್ ತಲುಪಬೇಕಿತ್ತು. ಆದರೆ ಚಂಡಮಾರುತದ ಪ್ರಭಾವ ಅದು ಸಾಧ್ಯವಾಗಿಲ್ಲ. ಬಾರೀ ಮಳೆ ಗಾಳಿ ಹಿನ್ನೆಲೆ ಭಾರತ ತಂಡವೂ ನ್ಯೂಯಾರ್ಕ್ ನಿಂದ ಬರುವ ಪ್ಲ್ಯಾನ್ ಚೆಂಜ್ ಆಗಿದೆ. ಇನ್ನು ವಿಶೇಷ ವಿಮಾನದ ಮೂಲಕ ನೇರವಾಗಿ ದೆಹಲಿ ತಲುಪುವ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆಯಂತೆ. ಆದರೆ ಅದಕ್ಕೂ ವಾತಾವರಣದಲ್ಲಿ ಸೌಮ್ಯತೆ ಬೇಕಾಗುತ್ತದೆ. ಸೈಕ್ಲೋನ್ ಕಡಿಮೆಯಾದ ಮೇಲೆ ಈ ಬಗ್ಗೆ ಸರಿಯಾದ ನಿರ್ಧಾರ ಕೈಗೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಈಗಾಗಲೇ ಮಾಡುತ್ತಿರುವ ಪ್ಲ್ಯಾನ್ ಪ್ರಕಾರ ಟೀಂ ಇಂಡಿಯಾ ಹೊರಟರೆ ಜುಲೈ 3ಕ್ಕೆ ತವರಿಗೆ ಬರಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment