Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮಲಲ್ಲಾ ಮೂರ್ತಿ ಹಿಂದಿದೆ ಕಣ್ಣೀರ ಕಥೆ : ಮೂರ್ತಿಗೆ ಕಲ್ಲು ಕೊಟ್ಟಿದ್ದ ಗುತ್ತಿಗೆದಾರನಿಗೆ 80 ಸಾವಿರ ದಂಡ..!

Facebook
Twitter
Telegram
WhatsApp

 

ಮೈಸೂರು: ನಿನ್ನೆಯಷ್ಟೇ ರಾಮಲಲ್ಲಾ ಮೂರ್ತಿಯ ಉದ್ಘಾಟನೆಯಾಗಿದೆ. ಇಡೀ ವಿಶ್ವದ ಹಿಂದೂಗಳೆಲ್ಲಾ ಹೆಮ್ಮೆ ಪಟ್ಟಿದ್ದಾರೆ. ಕಣ್ಣು ತೆರೆದ ರಾಮಲಲ್ಲಾನನ್ನು ಕಂಡು ಸಂತಸಗೊಂಡಿದ್ದಾರೆ. ಭಕ್ತಿ ಭಾವದಿಂದ ಕಣ್ತುಂಬಿಕೊಂಡಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ರಾಮಲಲ್ಲಾ‌ ಮೂರ್ತಿ ಕೆತ್ತಲು ಕಲ್ಲು ನೀಡಿದ ಗುತ್ತುಗೆದಾರ ಸಂಕಷ್ಟದಲ್ಲಿರುವುದು ಬೆಳಕಿಗೆ ಬಂದಿದೆ.

ಖಾಸಗಿ ಚಾನೆಲ್ ಒಂದು ಮಾಡಿರುವ ಚಿಟ್ ಚಾಟ್ ನಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಗುತ್ತಿಗೆದಾರ ಶ್ರೀನಿವಾಸ್ ರಾಮಶಿಲೆ ನೀಡಿದ್ದಾರೆ. ಭೂ ಮಾಲೀಕ ರಾಮದಾಸ್ ಅವರು ಭೂಮಿ ಒಳಗಿದ್ದ ಬಂಡೆ ತೆಗೆಯುವಂತೆ ಶ್ರೀನಿವಾಸ್ ಅವರಿಗೆ ಗುತ್ತಿಗೆ ನೀಡಿದ್ದರಂತೆ. ಆ ಕಲ್ಲನ್ನು ಹೊರತೆಗೆದು ಜಮೀನಿನ ಪಕ್ಕದಲ್ಲಿಯೇ ಇಟ್ಟಿದ್ದರಂತೆ. ಅದೇ ವೇಳೆ ಸ್ಥಳಕ್ಕೆ ಬಂದ ಅಧಿಕಾರಿಗಳು ಗಣಿಗಾರಿಕೆ ಅಂತ ಹೇಳಿ 80 ಸಾವಿರ ದಂಡ ಹಾಕಿದ್ದಾರಂತೆ. ಮೈಸೂರಿನ ಹಾರೋಹಳ್ಳಿ-ಗುಜ್ಜೆಗೌಡನಪುರ ಗ್ರಾಮದ ನಿವಾಸಿಯಾಗಿರುವ ಗುತ್ತಿಗೆದಾರ ಶ್ರೀನಿವಾಸ್ ಆ ದಂಡವನ್ನು ಕಟ್ಟಿದ್ದಾರಂತೆ.

 

ವರಮಹಾಲಕ್ಷ್ಮೀ ಹಬ್ಬದ ದಿನವೇ ಇಲಾಖೆಗೆ ದಂಡ ಕಟ್ಟಿರುವ ಶ್ರೀನಿವಾಸ್, ತನ್ನ ಹೆಂಡತಿಯ ಒಡವೆಯನ್ನು ಅಡವಿಟ್ಟು ಹಣ ಒದಗಿಸಿದ್ದರಂತೆ. ಅಂದು ದಂಡ ಕಟ್ಟಿದ್ದ ಶಿಲೆಯ ಇಂದು ರಾಮಲಲ್ಲಾ ಮೂರ್ತಿಯಾಗಿದೆ. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ನನಗೆ ಈವರೆಗೂ ಯಾರೂ ಸಹಾಯ ಮಾಡಿಲ್ಲ. ರಾಮಲಲ್ಲಾ ವಿಗ್ರಹಕ್ಕೆ ಶಿಲೆ ತೆಗೆದುಕೊಟ್ಟ ನನ್ನ ಕಷ್ಟ ಇನ್ನು ತೀರಿಲ್ಲ. ಈಗಲಾದರೂ ಯಾರಾದರೂ ಸಹಾಯ ಮಾಡುತ್ತಾರಾ ಎಂಬ ನಿರೀಕ್ಷೆಯಲ್ಲಿದ್ದೀನಿ ಎಂದು ಗುತ್ತಿಗೆದಾರ ಶ್ರೀನಿವಾಸ್, ಖಾಸಗಿ ಚಾನೆಲ್ ಒಂದಕ್ಕೆ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!