Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆದಿಪುರುಷ್ ಚಿತ್ರದ ಟೀಸರ್ ಬಿಡುಗಡೆ ; ನಟಿ ಮಾಳವಿಕಾ ಅವಿನಾಶ್ ಆಕ್ಷೇಪ

Facebook
Twitter
Telegram
WhatsApp

ಬೆಂಗಳೂರು : ಇತ್ತೀಚೆಗೆ ಬಿಡುಗಡೆಯಾದ ಪ್ರಭಾಸ್ ಆದಿಪುರುಷ ಚಿತ್ರದ ಟೀಸರ್ ಗೆ ಎಲ್ಲೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಟೀಸರ್ ಅದ್ಭುತವಾಗಿದೆ ಎಂದು ಕೆಲವರು ಹೊಗಳಿದರೆ, ಇನ್ನು ಕೆಲವರು ಇದೊಂದು ಕಾರ್ಟೂನ್ ಸಿನಿಮಾದಂತಿದೆ ಎಂದು ಟೀಕಿಸುತ್ತಿದ್ದಾರೆ.

ಹಲವು ನಿರೀಕ್ಷೆಗಳ ನಡುವೆ ಬಿಡುಗಡೆಯಾಗಿರುವ ಟೀಸರ್ ನಿರಾಸೆ ಮೂಡಿಸಿದೆ ಎನ್ನಲಾಗಿದೆ. ಇದೇ ವೇಳೆ ಬಿಜೆಪಿ ವಕ್ತಾರೆ, ನಟಿ ಮಾಳವಿಕಾ ಅವಿನಾಶ್ ಅವರು ಟೀಸರ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಚಿತ್ರದ ನಿರ್ದೇಶಕ ಓಂ ರಾವುತ್ ವಿರುದ್ಧ ವಾಗ್ದಾಳಿ ನಡೆಸಿ, ರಾಮಾಯಣವನ್ನು ಅಧ್ಯಯನ ಮಾಡದೆ ಸಿನಿಮಾ ಮಾಡಿದ್ದೀರಾ ? ಎಂದು ಟ್ವೀಟ್ ಮಾಡಿದ್ದಾರೆ.

ಲಂಕಾದ ರಾವಣ ಶಿವನ ಭಕ್ತ ಬ್ರಾಹ್ಮಣ. ಅವರು 64 ಕಲೆಗಳನ್ನು ಕರಗತ ಮಾಡಿಕೊಂಡಿದ್ದರು. ವೈಕುಂಠವನ್ನು ರಕ್ಷಿಸುತ್ತಿದ್ದ ಜಯ ಶಾಪದಿಂದ ರಾವಣನಾಗಿ ಅವತರಿಸಿದ. ಆದರೆ ಬಾಲಿವುಡ್ ನಿರ್ದೇಶಕರು ನಮ್ಮ ಇತಿಹಾಸ ಮತ್ತು ರಾಮಾಯಣವನ್ನು ತಪ್ಪಾಗಿ ತೋರಿಸುತ್ತಿದ್ದಾರೆ. ಇದನ್ನು ಮೊದಲು ನಿಲ್ಲಿಸಿ’ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ನಿರ್ದೇಶಕ ಓಂ ರಾವುತ್. ವಾಲ್ಮೀಕಿಯ ರಾಮಾಯಣ ಮತ್ತು ತುಳಸೀದಾಸರ ರಾಮಾಯಣವನ್ನು ಅಧ್ಯಯನ ಮಾಡಿಲ್ಲ. ಇದುವರೆಗೆ ಬಿಡುಗಡೆಯಾಗಿರುವ ಪೌರಾಣಿಕ ಸಿನಿಮಾಗಳಲ್ಲಿ ರಾವಣನ ಪಾತ್ರವಾದರೂ ಏನಿದೆ ಎಂಬುದನ್ನು ಪರಿಶೀಲಿಸಬೇಕು ಎಂದು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!