Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭೀಮ ಸಮುದ್ರಕ್ಕೆ ತಹಶೀಲ್ದಾರ್ ಭೇಟಿ : ಸರ್ಕಾರಿ ಶಾಲೆ, ಆಸ್ಪತ್ರೆಗೆ ಭೇಟಿ : ಜಯಪ್ಪಗೆ ಸರ್ಕಾರಿ ಸವಲತ್ತುಗಳ ಭರವಸೆ

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ, ಜುಲೈ. 30 : ಕಳೆದ ಶುಕ್ರವಾರ ಮಳೆಯಿಂದಾಗಿ ಕುಸಿದು ಬಿದ್ದದ್ದ ಜಯಪ್ಪ ಅವರ ಮನೆಗೆ ಇಂದು (ಮಂಗಳವಾರ) ತಹಶೀಲ್ದಾರ್  ನಾಗವೇಣಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನಂತರ ಮಾತನಾಡಿದ ಅವರು, ಮನೆ ಬಿದ್ದು ಹಾನಿಗೊಳಗಾದ ಜಯಪ್ಪನವರಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಆದಷ್ಟು ಬೇಗ ಕುಡಿಸಲು ಪ್ರಯತ್ನಿಸುತ್ತಿದ್ದೇವೆ. ಸದ್ಯಕ್ಕೆ ಅವರಿಗೆ ವಾಸ ಮಾಡಲು ಶಾಲಾ ಕೊಠಡಿಯನ್ನು ನೀಡಿದ್ದೇವೆ. ಮತ್ತು ಅವರಿಗೆ ಶಾಲೆಯಲ್ಲಿ ನೀಡಲಾಗುತ್ತಿರುವ ಮಧ್ಯಾಹ್ನದ ಬಿಸಿ ಊಟವನ್ನು ನೀಡುವಂತೆ ತಿಳಿಸಿದ್ದೇವೆ. ಅವರು ತುಂಬಾ ಬುಡವರಾಗಿದ್ದು ಜೀವನಕ್ಕೆ ಮೇಕೆ ಸಾಕಾಣೆ ಮಾಡುತ್ತಿದ್ದರು. ದುರದೃಷ್ಟವಶಾತ್ ಮಳೆಯಿಂದ ಸಾಕಿರುವ 7 ಮೇಕೆಗಳು ಮೃತಪಟ್ಟಿವೆ. ಆದಷ್ಟು ಬೇಗ ಮನೆಯ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗೆ ಭೇಟಿ ನೀಡಿ, ಮಕ್ಕಳ ಹಾಜರಾತಿ,  ಬಿಸಿ ಊಟದ ವ್ಯವಸ್ಥೆಯನ್ನು ಪರಿಶೀಲಿಸಿದರು.


ಆಸ್ಪತ್ರೆಗೆ ಭೇಟಿ ನೀಡಿ ಜನವರಿಯಿಂದ ಡೆಂಗಿ ಜ್ವರ ಜಾಸ್ತಿಯಾಗಿದ್ದು ಇದರ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವಂತೆ ವೈದ್ಯರಿಗೆ ತಿಳಿಸಿದರು. ಔಷಧಿ ದಾಸ್ತಾನು ಓ ಪಿ ಡಿ ಪರಿಶೀಲಿಸಿದರು.  ಹಾಗೆಯೇ  ಇದೇ ಸಂದರ್ಭದಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದ ಸಾರ್ವಜನಿಕರನ್ನು ಮಾತನಾಡಿಸಿ ವೈದ್ಯರು ಸಮಯಕ್ಕೆ ಸರಿಯಾಗಿ ಬರುತ್ತಾರಾ ಎಂದು ಗ್ರಾಮಸ್ಥರನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ವತ್ಸಲ, ಗ್ರಾಮ ಆಡಳಿತ ಅಧಿಕಾರಿ ಸದಾನಂದ ಹಾಗೂ ಸಾರ್ವಜನಿಕರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!