Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೀಮ ಸಮುದ್ರಕ್ಕೆ ತಹಶೀಲ್ದಾರ್ ಭೇಟಿ : ಸರ್ಕಾರಿ ಶಾಲೆ, ಆಸ್ಪತ್ರೆಗೆ ಭೇಟಿ : ಜಯಪ್ಪಗೆ ಸರ್ಕಾರಿ ಸವಲತ್ತುಗಳ ಭರವಸೆ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಜುಲೈ. 30 : ಕಳೆದ ಶುಕ್ರವಾರ ಮಳೆಯಿಂದಾಗಿ ಕುಸಿದು ಬಿದ್ದದ್ದ ಜಯಪ್ಪ ಅವರ ಮನೆಗೆ ಇಂದು (ಮಂಗಳವಾರ) ತಹಶೀಲ್ದಾರ್  ನಾಗವೇಣಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನಂತರ ಮಾತನಾಡಿದ ಅವರು, ಮನೆ ಬಿದ್ದು ಹಾನಿಗೊಳಗಾದ ಜಯಪ್ಪನವರಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಆದಷ್ಟು ಬೇಗ ಕುಡಿಸಲು ಪ್ರಯತ್ನಿಸುತ್ತಿದ್ದೇವೆ. ಸದ್ಯಕ್ಕೆ ಅವರಿಗೆ ವಾಸ ಮಾಡಲು ಶಾಲಾ ಕೊಠಡಿಯನ್ನು ನೀಡಿದ್ದೇವೆ. ಮತ್ತು ಅವರಿಗೆ ಶಾಲೆಯಲ್ಲಿ ನೀಡಲಾಗುತ್ತಿರುವ ಮಧ್ಯಾಹ್ನದ ಬಿಸಿ ಊಟವನ್ನು ನೀಡುವಂತೆ ತಿಳಿಸಿದ್ದೇವೆ. ಅವರು ತುಂಬಾ ಬುಡವರಾಗಿದ್ದು ಜೀವನಕ್ಕೆ ಮೇಕೆ ಸಾಕಾಣೆ ಮಾಡುತ್ತಿದ್ದರು. ದುರದೃಷ್ಟವಶಾತ್ ಮಳೆಯಿಂದ ಸಾಕಿರುವ 7 ಮೇಕೆಗಳು ಮೃತಪಟ್ಟಿವೆ. ಆದಷ್ಟು ಬೇಗ ಮನೆಯ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗೆ ಭೇಟಿ ನೀಡಿ, ಮಕ್ಕಳ ಹಾಜರಾತಿ,  ಬಿಸಿ ಊಟದ ವ್ಯವಸ್ಥೆಯನ್ನು ಪರಿಶೀಲಿಸಿದರು.


ಆಸ್ಪತ್ರೆಗೆ ಭೇಟಿ ನೀಡಿ ಜನವರಿಯಿಂದ ಡೆಂಗಿ ಜ್ವರ ಜಾಸ್ತಿಯಾಗಿದ್ದು ಇದರ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವಂತೆ ವೈದ್ಯರಿಗೆ ತಿಳಿಸಿದರು. ಔಷಧಿ ದಾಸ್ತಾನು ಓ ಪಿ ಡಿ ಪರಿಶೀಲಿಸಿದರು.  ಹಾಗೆಯೇ  ಇದೇ ಸಂದರ್ಭದಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದ ಸಾರ್ವಜನಿಕರನ್ನು ಮಾತನಾಡಿಸಿ ವೈದ್ಯರು ಸಮಯಕ್ಕೆ ಸರಿಯಾಗಿ ಬರುತ್ತಾರಾ ಎಂದು ಗ್ರಾಮಸ್ಥರನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ವತ್ಸಲ, ಗ್ರಾಮ ಆಡಳಿತ ಅಧಿಕಾರಿ ಸದಾನಂದ ಹಾಗೂ ಸಾರ್ವಜನಿಕರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment