Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಡಿಭಾಗದಲ್ಲಿ ತೆಲುಗು ಭಾಷೆಯ ನಾಮಫಲಕಗಳು : ಕನ್ನಡ ಭಾಷಾ ಜಾಗೃತಿ ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ :  ಕೊರ್ಲಕುಂಟೆ ತಿಪ್ಪೇಸ್ವಾಮಿ

Facebook
Twitter
Telegram
WhatsApp

 

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್.17 :  ಗಡಿಭಾಗದಲ್ಲಿ ಕನ್ನಡ ಭಾಷಾ ಜಾಗೃತಿಗೆ ಪ್ರತಿಯೊಬ್ಬ ಕನ್ನಡಿಗರ ಜಾಗೃತಿ ಅಗತ್ಯ ಇದೆ ಎಂದು ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೊರ್ಲಕುಂಟೆ ತಿಪ್ಪೇಸ್ವಾಮಿ ಹೇಳಿದರು.

ತಾಲೂಕಿನ ಗಡಿಭಾಗದಲ್ಲಿ ವೇದಿಕೆ ಸಂಘಟನೆಯೊಂದಿಗೆ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪರಶುರಾಂಪುರ-ಕೊರ್ಲಕುಂಟೆ ರಸ್ತೆ ಮಾರ್ಗದಲ್ಲಿ ತೆಲುಗು ಭಾಷೆಯಲ್ಲಿ ಅಳವಡಿಸಿದ್ದ ನಾಮಫಲಕಗಳಿಗೆ ಮಸಿ ಬಳಿಯುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಡಿಭಾಗದಲ್ಲಿ ತೆಲುಗು ಭಾಷೆಯ ನಾಮಫಲಕಗಳು ಕಂಡು ಬಂದಲ್ಲಿ ತಾಲೂಕು ಆಡಳಿತ ಮತ್ತು ಸ್ಥಳೀಯ ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗುತ್ತಿದೆ. ನಿರ್ಲಕ್ಷ್ಯ ತೋರುವ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ನೋಟೀಸ್ ಜಾರಿ ಮಾಡಬೇಕು ಎಂದ ಅವರು, ವಾಣಿಜ್ಯ ವ್ಯಾಪಾರಸ್ಥರು ತೆಲುಗು ನಾಮಫಲಕಗಳು ಅಳವಡಿಸುವುದು ಕಂಡು ಬಂದಲ್ಲಿ ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ತೆಲುಗು ಭಾಷೆ ಬಳಸುವ ಮಾಲೀಕರಿಗೆ ನೋಟೀಸ್ ಜಾರಿ ಮಾಡುವ ಮೂಲಕ ಅಂಗಡಿ ಪರವಾನಗಿ ರದ್ದುಪಡಿಸಬೇಕು. ಗಡಿಭಾಗದಲ್ಲಿ ಭಾಷೆಯ ರಕ್ಷಣೆ ಮಾಡಿಕೊಳ್ಳುವುದು ಯಾವುದೋ ಒಂದು ಕನ್ನಡ ಸಂಘಟನೆ ಮತ್ತು ಸಂಸ್ಥೆಯವರ ಜವಾಬ್ದಾರಿ ಎನ್ನುವ ನಿರ್ಲಕ್ಷ್ಯ ದೂರವಾಗಬೇಕು. ಇಲ್ಲಿನ ನೆಲ, ಗಾಳಿ, ಬೆಳಕು ಬೆಳಸಿಕೊಂಡು ವ್ಯವಹಾರ ಆರಂಭಿಸುವ ಪ್ರತಿಯೊಬ್ಬರಿಗೂ ಈ ನೆಲದ ಸಂಸ್ಕೃತಿ ಮತ್ತು ಭಾಷೆಯ ಗೌರವ ಇರಬೇಕು ಎಂದು ಹೇಳಿದರು.

ತೆಲುಗು ಭಾಷೆಯಲ್ಲಿ ನಾಮಫಲಕ ಬರೆಸಿದ್ದ ವ್ಯಾಪಾರ ಮಾಲೀಕ ನಾಗೇಶ್ ಮಾತನಾಡಿ, ಗಡಿಭಾಗದಲ್ಲಿ ಭಾಷಾ ರಕ್ಷಣೆಗೆ ಪ್ರತಿಯೊಬ್ಬರೂ ಎಚ್ಚರವಾಗಿರಬೇಕಾಗಿದೆ. ಕಣ್ತಪ್ಪಿನಿಂದ ತೆಲುಗು ಭಾಷೆಯ ನಾಮಫಲಕ ಸ್ಥಾಪನೆ ಮಾಡಲಾಗಿದೆ. ಸ್ವತಃ ನನ್ನ ಕೈಯಾರೆ ಕಪ್ಪು ಮಸಿ ಬಳಿಯುವ ಮೂಲಕ ಇನ್ನು ಮುಂದೆ ಇಂತಹ ತಪ್ಪು ಮಾಡುವುದಿಲ್ಲ ಎಂದು ನಾಮಫಲಕಕ್ಕೆ ಕಪ್ಪು ಮಸಿ ಬಳಿಯಲಾಯಿತು.
ಸ್ಥಳೀಯರಾದ ಗ್ರಾಪಂ ಮಾಜಿ ಸದಸ್ಯ ಡಿ. ಸಿರಿಯಣ್ಣ, ಕೆ.ವಿ. ಪ್ರಸನ್ನ, ಮೀಸೆ ಮಹಾಲಿಂಗಪ್ಪ, ಹೊರಕೆರೆ ರಂಗಸ್ವಾಮಿ, ಪಿ. ರಾಮದಾಸ, ಮಂಜುನಾಥ, ರಾಜಣ್ಣ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

ಪ್ರಜ್ವಲ್ ಹಾಗೂ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಿ : ಗೀತಾ ನಂದಿನಿಗೌಡ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ

error: Content is protected !!