Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಗರದಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ತಾತ್ಕಾಲಿಕ ನೀರಿನ ತೊಟ್ಟಿ ವ್ಯವಸ್ಥೆ : ಇಲ್ಲಿದೆ ಮಾಹಿತಿ…!

Facebook
Twitter
Telegram
WhatsApp

ಸುದ್ದಿಒನ್,  ಚಿತ್ರದುರ್ಗ.ಸೆ.15: ಸೆಪ್ಟೆಂಬರ್ 18 ರಂದು ಗಣೇಶ ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿಗಳನ್ನು ಪೂಜಿಸಿದ ನಂತರ ನೀರಿನ ಮೂಲಗಳಾದ ಹೊಂಡ, ಕೆರೆ, ಭಾವಿಗಳಲ್ಲಿ ವಿಸರ್ಜಿಸುವುದರಿಂದ ಜಲ ಮಾಲಿನ್ಯ ಹಾಗೂ ಪರಿಸರ ಮಾಲಿನ್ಯ ಉಂಟಾಗಿ ಜೀವ ರಾಶಿಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ಪರಿಸರಕ್ಕೆ ದಕ್ಕೆಯಾಗದಂತೆ ಗಣೇಶ ಚತುರ್ಥಿ ಆಚರಿಸಲು ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ತಾತ್ಕಾಲಿಕ ನೀರಿನ ತೊಟ್ಟಿಗಳ ವ್ಯವಸ್ಥೆ ಮಾಡಲಾಗಿದೆ.

ಚಿತ್ರದುರ್ಗ ನಗರಸಭೆ ಪ್ರದೇಶದ ಸಾರ್ವಜನಿಕರು ಪೂಜಿಸಿದ ನಂತರ ಗಣೇಶ ಮೂರ್ತಿಗಳನ್ನು ವಿಸರ್ಜಿಸಲ ತಾತ್ಕಾಲಿಕ ನೀರಿನ ತೊಟ್ಟಿಗಳನ್ನು ಸದ್ಬಳಕೆ ಮಾಡಿಕೊಂಡು ಪರಿಸರ ಸ್ನೇಹಿಯಾಗಿ ಗಣೇಶ ಚತುರ್ಥಿಯನ್ನು ಆಚರಿಸಲು ಕೋರಿದೆ.

ತಾತ್ಕಾಲಿಕ ನೀರಿನ ತೊಟ್ಟಿ ವ್ಯವಸ್ಥೆ ಮಾಡಿರುವ ಸ್ಥಳಗಳ ವಿವರ: ಚಿತ್ರದುರ್ಗ ನಗರದ ಒನಕೆ ಓಬವ್ವ ಸ್ಟೆಡಿಯಂ ಹತ್ತಿರ, ಸ್ಟೆಡಿಯಂ ರಸ್ತೆ, ರಾಜ್ ಕುಮಾರ್ ಪಾರ್ಕ್ ಹತ್ತಿರ ಐಯುಡಿಪಿ ಬಡಾವಣೆ, ಏಕನಾಥೇಶ್ವರಿ ಪಾದ ಗುಡಿ ಮುಂಭಾಗ ಕೋಟೆ ರಸ್ತೆ, ಗಣೇಶ ದೇವಸ್ಥಾನದ ಹತ್ತಿರ ಜೆ.ಸಿ.ಆರ್. ಬಡಾವಣೆ, ಸಿಹಿನೀರು ಹೊಂಡದ ಆವರಣ, ಪತಾಂಜಲಿ ಆಸ್ಪತ್ರೆ ಪಕ್ಕ, ಚಿನ್ನಕೇಶವಸ್ವಾಮಿ ದೇವಸ್ಥಾನದ ಹತ್ತಿರ ಕೆಳಗೋಟೆ, ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಮುಂಭಾಗ ತುರುವನೂರು ರಸ್ತೆ, ದವಳಗಿರಿ ಬಡಾವಣೆ ಗಣೇಶ ದೇವಸ್ಥಾನದ ಮುಂಭಾಗ, ಗೋಪಾಲಪುರ ನೀರಿನ ಟ್ಯಾಂಕ್ ಹತ್ತಿರ, ರೈತ ಭವನದ ಹತ್ತಿರ ಗುಮಸ್ತರ ಕಲೋನಿ, ತಿಪ್ಪಿನಘಟ್ಟಮ್ಮ ದೇವಸ್ಥಾನದ ಹತ್ತಿರದ ಪಾರ್ಕ್, ಜೋಗಿಮಟ್ಟಿ ರಸ್ತೆ, ಚಂದ್ರವಳ್ಳಿ ಕೆರೆ ಹತ್ತಿರದ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!