Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಣಕಲ್ ಬಳಿ ನಿನ್ನೆ ಭೀಕರ ಸರಣಿ ಅಪಘಾತ | ಮೃತ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಘೋಷಣೆ : ಸಚಿವ ಡಿ. ಸುಧಾಕರ್

---Advertisement---

ಚಿತ್ರದುರ್ಗ, ಮೇ. 25 : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಲಾರಿ ಮತ್ತು ಕಾರುಗಳ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಚಿತ್ರದುರ್ಗ ಮೂಲದ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟು, ಆರು ಜನರಿಗೆ ಸಾಮಾನ್ಯ ಸ್ವರೂಪದ ಗಾಯಗಳಾಗಿದ್ದವು. ಗಂಭೀರವಾಗಿ ಗಾಯಗೊಂಡ ಮೂವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿತ್ತು.

ಈ ಆಕಸ್ಮಿಕ ದುರ್ಘಟನೆಯಲ್ಲಿ ಮೃತರಾದ ಕುಟುಂಬದರಿಗೆ ತಲಾ ಎರಡು ಲಕ್ಷ ರೂಪಾಯಿಗಳ ಪರಿಹಾರವನ್ನು ಮಾನ್ಯ ಮುಖ್ಯಮಂತ್ರಿಗಳ ಪರಿಹಾರನಿಧಿಯಿಂದ ಕೊಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಘೋಷಿಸಿದ್ದಾರೆ.

ಹಂಪಯ್ಯ (62), ಪ್ರೇಮಾ (58), ಮಂಜಯ್ಯ (60),
ಪ್ರಭಾಕರ್ (40) ಈ ನಾಲ್ವರು ಮೃತ ದುರ್ದೈವಿಗಳಾಗಿದ್ದು ಚಿತ್ರದುರ್ಗ ಹೊಳಲ್ಕೆರೆ ತಾಲೂಕಿನ ಚನ್ನಪಟ್ಟಣ ಗ್ರಾಮದವರೆಂದು ಗುರುತಿಸಲಾಗಿದೆ.

ಮೃತರು ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದು ವಾಪಸ್ ಬರುವಾಗ ಈ ಘಟನೆ ಸಂಭವಿಸಿದೆ.

ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗದ ಜಿಲ್ಲಾಧಿಕಾರಿಗಳು ಚಿಕ್ಕಮಗಳೂರಿನ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ, ವೈದ್ಯಕೀಯ ತಪಾಸಣೆಗಳ ನಂತರ ಮೃತರ ಕಳೇಬರಹವನ್ನು ಮೃತ ಕುಟುಂಬದವರಿಗೆ ತಲುಪಿಸಿ ಅಂತ್ಯಕ್ರಿಯೆ ಮಾಡಿಸುವಲ್ಲಿ ಸಹಕರಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment