Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿಟಿಟಿಸಿ ಕೇಂದ್ರದಲ್ಲಿ ವಿದ್ಯಾಭ್ಯಾಸ ಆರಂಭವಾದರೆ ನಿಮ್ಮ ವೃತ್ತಿ ಆರಂಭವಾದಂತೆ ಎಂದು ಶಾಸಕ ಟಿ.ರಘುಮೂರ್ತಿ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, (ಅ.04) : ಇಲ್ಲಿನ ಜಿಟಿಟಿಸಿ ಕೇಂದ್ರದಲ್ಲಿ ವಿದ್ಯಾಭ್ಯಾಸ ಆರಂಭವಾದರೆ ನಿಮ್ಮ ವೃತ್ತಿ ಪ್ರಾರಂಭವಾದಂತೆ ಎಂದು ಶಾಸಕ ಟಿ.ರಘುಮೂರ್ತಿ  ವಿದ್ಯಾರ್ಥಿಗಳಿಗೆ ಕಿವಿ ಮಾತು  ಹೇಳಿದರು.

ನಗರದ ಜಿಟಿಟಿಸಿ ಕೇಂದ್ರದ ತರಗತಿಗಳ  ಪ್ರಾರಂಭೋತ್ಸವ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಪೋಷಕರ ಸಭೆಯಲ್ಲಿ ಮಾತನಾಡಿದ ಅವರು ಹಿಂದುಳಿದ ತಾಲ್ಲೂಕಿನಲ್ಲಿ  ನಿರುದ್ಯೋಗವೇ ಹೆಚ್ಚಿನದಾಗಿ ತಾಂಡವಾಡುತ್ತಿರುವ ಇಲ್ಲಿ ಜಿಟಿಟಿಸಿ‌ ಕೇಂದ್ರ ಆರಂಭವಾಗಿರುವುದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ. ಇದರಿಂದ ನಿರುದ್ಯೋಗ ಮಟ್ಟ ಕಡಿಮೆಯಾಗಿ, ಶೈಕ್ಷಣಿಕವಾಗಿ ತಾಲ್ಲೂಕು ಅಭಿವೃದ್ಧಿಯಾಗಬೇಕೆಂದರೆ   ವಿದ್ಯಾರ್ಥಿ ಗಳು ನಿರಂತರ ಶ್ರಮಪಟ್ಟು  ಕಲಿತಾಗ  ಮಾತ್ರ ಎಂದು ಹೇಳಿದರು.

ಜಿಟಿಟಿಸಿ ಕೇಂದ್ರದ ಆರಂಭವಾಗಿರುವುದರಿಂದ ಮುಂದಿನ ಪೀಳಿಗೆಗೆ ಅನುಕೂಲವಾಗಲಿದೆ. ಈ ಕೇಂದ್ರದಲ್ಲಿ  ವಿದ್ಯಾರ್ಥಿಗಳು  ಕಲಿಯುವಂತದ್ದು ಬಹಳ ಇರುತ್ತದೆ.  ಅಲ್ಪಾವಧಿ ಉದ್ಯೋಗಾಧಾರಿತ ತರಬೇತಿಗಳು ಜಿಟಿಟಿಸಿ ಕೇಂದ್ರದಲ್ಲಿ ಕಲಿಯಬಹುದು ಎಂದು ಹೇಳಿದರು.

ಜಿಟಿಟಿಸಿ ಕೇಂದ್ರದಲ್ಲಿ ನಿಮ್ಮ ತರಬೇತಿ 3 ವರ್ಷ ಆದಾಗ 12 ರಿಂದ 15 ಸಾವಿರ ಸ್ಟೈ ಫಂಡ್ ನೀಡಿ ತರಬೇತಿ ನೀಡಲಾಗುತ್ತದೆ ಎಂದು ಹೇಳಿದ ಅವರು  ಕಲಿಕೆ ಕಷ್ಟ ಅಂತಹ ವಿದ್ಯಾಬ್ಯಾಸವನ್ನು ಮೊಟಕುಗೊಳಿಸಬೇಡಿ ಇಲ್ಲ ಕಷ್ಟಪಟ್ಟು ಕಲಿತರೆ ಮುಂದೆ ನಿಮ್ಮ ಜೀವನ ಉತ್ತಮವಾಗಿರುತ್ತದೆ, ಪೋಷಕರು ಕೂಡ ಮಕ್ಕಳ ವಿದ್ಯಾಬ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಬೇಡಿ ಮಕ್ಕಳ ವಿದ್ಯಾಬ್ಯಾಸಕ್ಕೆ ಸಹಕಾರ ನೀಡಬೇಕು ಎಂದು ಪೋಷಕರಿಗೆ ಶಾಸಕರು ತಿಳಿಸಿದರು.

ಈ ವೇಳೆನಗರಸಭೆ ಅಧ್ಯಕ್ಷೆ ಸಿ.ಬಿ.ಜಯಲಕ್ಷ್ಮೀ ಕೃಷ್ಣಮೂರ್ತಿ, ಉಪಾಧ್ಯಕ್ಷೆ ಜೈ ತುನ್ಬಿ ಮಲ್ಲಿಕಾ ಸಾಬ್, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗೌಡ, ಸದಸ್ಯ ರಾದ  ವೈ.ಪ್ರಕಾಶ್ ,   ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್,  ಜಿಟಿಟಿಸಿ ಕೇಂದ್ರ ವಿಭಾಗದ ಮುಖ್ಯಸ್ಥ ಲಕ್ಷ್ಮಣ್ ನಾಯ್ಕ್,  ಪ್ರಾಂಶುಪಾಲರಾದ ತಿಪ್ಪೇಸ್ವಾಮಿ, ಹೆಚ್ ಪಿಪಿಸಿ ಕಾಲೇಜಿನ‌ ಪ್ರಾಂಶುಪಾಲರಾದ ಶಿವಲಿಂಗಪ್ಪ ಹಾಗೂ ವಿದ್ಯಾರ್ಥಿಗಳ ಪೋಷಕರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!