Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿವೇದಿತಾ ಜೈನ್ ಸಾವಿನ ಬಗ್ಗೆ ಮೊದಲೇ ಎಚ್ಚರಿಸಿದ್ದರು ಆ ಮನುಷ್ಯ.. ಮನೆಯು ಸಿಗಲಿಲ್ಲ.. ನಟಿಯೂ ಉಳಿಯಲಿಲ್ಲ..!

Facebook
Twitter
Telegram
WhatsApp

ನಿವೇದಿತಾ ಜೈನ್ ಬದುಕಿದ್ದು ಕೇವಲ 19 ವರ್ಷ. ಆದರೆ ಹಲವು ಸಿನಿಮಾಗಳಲ್ಲಿ ನಟಿಸಿ, ಎಲ್ಲರನ್ನು ಬಿಟ್ಟು ಹೊರಟೆ ಹೋದರು. ಇಂದಿಗೂ ಅವೆ ಸಾವು ಆತ್ಮಹತ್ಯೆಯೋ, ಸಹಜ ಸಾವೋ ಎಂಬ ಪ್ರಶ್ನೆ ಕಾಡುತ್ತದೆ. ನಿವೇದಿತಾ ಜೈನ್ ಬದುಕಿದ್ದಿದ್ದರೆ ಬಾಲಿವುಡ್ ನಲ್ಲೂ ನಟಿಸುವ ಅವಕಾಶ ಇತ್ತು. ಅವರ ತಾಯಿ ಇದಕ್ಕೆಲ್ಲಾ ಉತ್ತರ ಕೊಟ್ಟಿದ್ದಾರೆ.

ರಘುರಾಮ್ ಎಂಬುವವರ ಯೂಟ್ಯೂಬ್ ಚಾನೆಲ್ ನಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಮಗಳ ಸಾವಿನ ಬಗ್ಗೆ ಮಾತನಾಡಿರುವ ಪ್ರಿಯಾ ಜೈನ್, ‘ನಿವೇದಿತಾ ಜೈನ್ 9ನೇ ತರಗತಿ ಓದುತ್ತಿರುವಾಗಲೇ ಮಿಸ್ ಬೆಂಗಳೂರು ಆಗಿದ್ದರು. ಮಿಸ್ ಬೆಂಗಳೂರು ಬಗ್ಗೆ ಪೇಪರ್ ನಲ್ಲಿ ಬಂದಿದ್ದನ್ನು ಅವರ ತಂದೆ ಫೋಟೋ ಕಳುಹಿಸಿಕೊಟ್ಟಿದ್ದರು. ಅವಳಿಗೆ ಕಾಲ್ ಬಂತು. ಅವಳ ಆಗಿನ ಹೈಟ್ ನೋಡಿ 18 ಇರಬಹುದು ಎಂದುಕೊಂಡಿದ್ದರು. ಅವಳಿಗೂ ಆ ಕಾಂಪಿಟೇಷನ್ ನಲ್ಲಿ ಭಾಗವಹಿಸುವ ಆಸೆ ಇತ್ತು. ಅದಾದ ಬಳಿಕ ಅವಳ ಫೋಟೋಗಳು ಪೇಪರ್, ಮ್ಯಾಗಜಿನ್ ನಲ್ಲಿ ಬಂತು. ಡಾ. ರಾಜ್‍ಕುಮಾರ್ ಅವರ ಮಗ ರಾಘವೇಂದ್ರ ರಾಜ್‍ಕುಮಾರ್ ಅವರ ಶಿವರಂಜಿನಿ ಸಿನಿಮಾಗೆ ಆಫರ್ ಬಂತು. ಅವಳು ತುಂಬಾನೇ ಚಿಕ್ಕವಳಿದ್ದಳು. ಹೀಗಾಗಿ ನಾವೂ ಆಸಕ್ತಿ ತೋರಿಸಲಿಲ್ಲ. ಅವಳು ಕೂಡ ಆಸಕ್ತಿ ಇಲ್ಲ ಎಂದಳು. ಆದರೆ ಅಣ್ಣಾವ್ರ ಬ್ಯಾನರ್ ಅಂತ ಒಪ್ಪಿದಳು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕುಟುಂಬ ಸಮೇತ ಹೋದೆವು. ಅಲ್ಲಿ ಪೂಜೆ ಮಾಡುತ್ತಿದ್ದ ವ್ಯಕ್ತಿ ಕರೆದು, ನಿಮ್ಮ ಮಗಳಿಗೆ ಅಲ್ಪ ಆಯಸ್ಸು ಎಂದು ಹೇಳಿದರು. ಮನೆಯ ದಿಕ್ಕುಗಳ ಬಗ್ಗೆಯೂ ಹೇಳಿದರು. ಆ ಮನೆ ನಿವೇದಿತಾ ಜೈನ್ ಅನ್ನು ಆಹುತಿ ಪಡೆಯುತ್ತೆ ಅಂತ ಕೂಡ ಹೇಳಿದ್ದರು. ಮನೆ ಬದಲಾಯಿಸಲು ಹೇಳಿದ್ದರು. ಅಲ್ಲಿಂದ ಬಂದ ಮೇಲೆ ಮನೆ ಹುಡುಕಲು ಶುರು ಮಾಡಿದೆವು. ಆದರೆ ಮನೆ ಸಿಗಲೇ ಇಲ್ಲ‌. ಅವರು ಹೇಳಿದಂತೆಯೇ ಘಟನೆ ನಡೆದು ಹೋಯ್ತು’ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!